ಆದರೆ, ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೋರ್ಡಿಂಗ್ ಪ್ರಕ್ರಿಯೆಯ ವೇಳೆ ಏರ್ಲೈನ್ಸ್ ಸಿಬ್ಬಂದಿ ವೀಸಾ ಇಲ್ಲ ಎಂಬ ಕಾರಣ ನೀಡಿ ಪ್ರಯಾಣಕ್ಕೆ ತಡೆ ಒಡ್ಡಿದ್ದಾರೆ. ಸತೀಶ್ಕುಮಾರ್ ಅವರ ಪ್ರಕಾರ, ಭಾರತೀಯ ಪಾಸ್ಪೋರ್ಟ್ ಹೊಂದಿರುವವರು ಅಮೆರಿಕ, ಬ್ರಿಟನ್ ಅಥವಾ ಆಸ್ಟ್ರೇಲಿಯಾದಂತಹ ದೇಶಗಳ ಮಾನ್ಯತೆ ಇರುವ ವೀಸಾ ಹೊಂದಿದ್ದರೆ ಪೆರು ಪ್ರವೇಶಿಸಲು ಪ್ರತ್ಯೇಕ ವೀಸಾ ಅಗತ್ಯವಿಲ್ಲ. ಆದರೆ ವಿಮಾನ ನಿಲ್ದಾಣದ ಸಿಬ್ಬಂದಿ ಈ ನಿಯಮವನ್ನು ಅರ್ಥೈಸಿಕೊಳ್ಳುವಲ್ಲಿ ವಿಫಲರಾಗಿ, ಕೊನೆ ಕ್ಷಣದಲ್ಲಿ ಬೋರ್ಡಿಂಗ್ ನಿರಾಕರಿಸಿದ್ದಾರೆ.
ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ನಲ್ಲಿ (Delhi High Court) ಸೋಮವಾರ ಮಹತ್ವದ ಬೆಳವಣಿಗೆ ನಡೆದಿದ್ದು, ಆಮ್ ಆದ್ಮಿ ಪಾರ್ಟಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ನ್ಯಾಯಮೂರ್ತಿ ಸ್ವರ್ಣಕಾಂತ ಶರ್ಮಾ ಅವರ ನ್ಯಾಯಪೀಠದ ಮೇಲೆ ಅಪನಂಬಿಕೆ ವ್ಯಕ್ತಪಡಿಸಿದ್ದಾರೆ.