ಪುತ್ತೂರು: ಲೋಕ ಸಭಾ ಚುನಾವಣಾ ಪಲಿತಾಂಶ ನಾಳೆ ಪ್ರಕಟವಾಗಲಿದ್ದು, ಈ ಪ್ರಯುಕ್ತ ಪುತ್ತೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಬರೋಬ್ಬರಿ 3 ಕ್ವಿಂಟಾಲ್ ಹೆಚ್ಚು ಲಡ್ಡು ಮಾಡುವ ಮೂಲಕ ಭರ್ಜರಿ ಸಿದ್ಧತೆ ಮಾಡಿಕೊಂಡಿದ್ದಾರೆ.
ನಾಳೆ ಲೋಕಸಭಾ ಚುನಾವಣೆಯ ಮತ ಎಣಿಕೆ ಹಿನ್ನಲೆ ಎಲ್ಲಾ ಪಕ್ಷದ ಕಾರ್ಯಕರ್ತರಲ್ಲಿ ಕುತೂಹಲ ಮನೆಮಾಡಿದ್ದು, ಗೆಲುವಿನ ಸಂಭ್ರಮಕ್ಕೆ ಎಲ್ಲ ಪಕ್ಷಗಳು ಸಿದ್ಧತೆ ಮಾಡಿಕೊಂಡಿವೆ.
ಅಂತೆಯೇ ಕೇಂದ್ರದಲ್ಲಿ ಮತ್ತೆ ನರೇಂದ್ರ ಮೋದಿ ಪ್ರಧಾನಿಯಾಗುತ್ತಾರೆ ಎನ್ನುವ ಸಂತಸದಲ್ಲಿ ಹೆಚ್ಚಾಗಿದ್ದು, ಈ ಕಾರಣಕ್ಕೆ ಎಲ್ಲಾ ಬೇಕರಿಯಲ್ಲಿ ಲಡ್ಡುಗಳಿಗೆ ಬೇಡಿಕೆ ಕೂಡ ಹೆಚ್ಚಾಗಿದೆ ಎನ್ನಲಾಗಿದೆ.