ಬೆಳಗಾವಿ : ಆಸ್ತಿಗಾಗಿ ಮಾಟ ಮಂತ್ರ ಮಾಡಿದ್ದಾರೆ ಎಂದು ಆರೋಪಿಸಿ ಖ್ಯಾತ ಉದ್ಯಮಿ ಡಾ.ವಿಜಯ ಸಂಕೇಶ್ವರ ಪುತ್ರಿ, ಮಾಜಿ ಸಂಸದ ಎಸ್.ಬಿ ಸಿದ್ನಾಳರ ಸೊಸೆ ದೀಪಾ ಸಿದ್ನಾಳ ಪೊಲೀಸ್ ಮೆಟ್ಟಿಲೇರಿದ್ದಾರೆ.
ಆಸ್ತಿಗಾಗಿಸದ ಎಸ್.ಬಿ ಸಿದ್ನಾಳ ಕಿರಿಯ ಸೊಸೆ, ಖ್ಯಾತ ಉದ್ಯಮಿ ಡಾ.ವಿಜಯ ಸಂಕೇಶ್ವರ ಅವರ ದ್ವಿತೀಯ ಪುತ್ರಿ ದೀಪಾ ಅವರು ಬೆಳಗಾವಿ ನಗರದ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ದೀಪಾ ಸಿದ್ನಾಳ ಅವರು BNS 1860, ಸೆಕ್ಷನ್ 120ಬಿ, 506, 307, ಮಾಟ ಮಂತ್ರ ಕಾಯ್ದೆ 2007 ಅಡಿಯಲ್ಲಿ ದೂರು ಕೂಡ ದಾಖಲಿಸಿದ್ದಾರೆ.
ಉದ್ಯಮಿ ಡಾ.ವಿಜಯ ಸಂಕೇಶ್ವರ ಪುತ್ರಿ ದೀಪಾ ಸಿದ್ನಾಳ ಅವರು ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ವಿಜಯಕಾಂತ ಹಾಲಿನ ಡೇರಿ ಕಬಳಿಸಲು ಹುನ್ನಾರ ಮಾಡಿದ್ದಾರೆ ಎನ್ನುವ ಗಂಭೀರ ಆರೋಪ ಮಾಡಿದ್ದಾರೆ.
ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇತ್ತೀಚಿಗೆ ಶಿವಕಾಂತ್ ಸಿದ್ನಾಳ್ ಸಾವನ್ನಪ್ಪಿದ್ದಾರೆ. ನನ್ನ ಪತಿ ಸಾವಿಗೂ ಮಾಟ, ಮಂತ್ರ ಕಾರಣವಿರಬಹುದೆಂಬ ಶಂಕೆ ವ್ಯಕ್ತಪಡಿಸಿದ್ದು, ಅವರ ಸಮಾಧಿ ಸುತ್ತಮುತ್ತ ಮಾಟಮಂತ್ರ ಮಾಡಿದ್ದಾರೆಂದು ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ.