ಬೀದರ್: ತಮ್ಮ ನೆಚ್ಚಿನ ನಟ-ನಟಿಯರ ಅಭಿಮಾನಕ್ಕಾಗಿ ಹಲವು ಅಭಿಮಾನಿಗಳು ತಮ್ಮ ಎದೆಯ ಮೇಲೆ ಅಚ್ಚೆ ಹಾಕಿಸಿಕೊಂಡ ಉದಾಹರಣೆಗಳಿವೆ. ಆದ್ರೆ ಇಲ್ಲೊಬ್ಬ ಅಭಿಮಾನಿ ತನ್ನ ನೆಚ್ಚಿನ ನಾಯಕ ಫೋಟೋವನ್ನು ಎದೆ ಮೇಲೆ ಟ್ಯಾಟೂ ಹಾಕಿಸಿಕೊಳ್ಳುವ ಮೂಲಕ ಅಭಿಮಾನ ತೋರಿದ್ದಾನೆ.
ಬೀದರ್ ತಾಲೂಕಿನ ಕಮಠಾಣ ಶಿವಾಜಿ ಗಾಯಕವಾಡ ಎಂಬುವರು ತಮ್ಮ ಎದೆಯ ಎಡ ಭಾಗದ ಮೇಲೆ ನೆಚ್ಚಿನ ನಾಯಕರಾದ ಅರಣ್ಯ ಪರಿಸರ ಹಾಗೂ ಜೈವಿಕ ಖಾತೆ ಸಚಿವ ಈಶ್ವರ ಖಂಡ್ರೆ ಅವರ ಭಾವಚಿತ್ರದ ಟ್ಯಾಟೂ ಹಾಕಿಸಿಕೊಂಡು ಗಮನ ಸೆಳೆದಿದ್ದಾರೆ.
ಟ್ಯಾಟೂ ಹಾಕಿಸಿಕೊಂಡ ನಂತರ ಮಾತನಾಡಿದ ಶಿವಾಜಿ, ಕಳೆದ ಹತ್ತು ವರ್ಷಗಳಿಂದ ನಾನು ಸಚಿವ ಈಶ್ವರ ಖಂಡ್ರೆಯವರ ಅಭಿಮಾನಿ, ಅಂದಿನಿಂದ ಅವರ ಭಾವಚಿತ್ರದ ಟ್ಯಾಟೂ ಹಾಕಿಸಿಕೊಳ್ಳಬೇಕೆಂಬ ಆಸೆಯಿತ್ತು. ಆದ್ರೆ ಇವತ್ತು ಟ್ಯಾಟೂ ಹಾಕಿಸಿಕೊಳ್ಳಲು ಸಾಧ್ಯವಾಯ್ತು ಎಂದಿದ್ದಾರೆ
ಅಲ್ಲದೇ ಕಮಠಾಣ ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ ಅವರನ್ನು ಭೇಟಿಯಾಗಿ ಶಿವಾಜಿ ಟ್ಯಾಟೂ ತೋರಿಸಿದ್ದಾರೆ..ಜೊತೆಗೆ ಟ್ಯಾಟೂವನ್ನು ಅವರಿಗೆ ತುಂಬಾ ಖುಷಿಯಗಿದೆ ಎಂದಿದ್ದಾರೆ