Sunday, July 7, 2024
Homeಟಾಪ್ ನ್ಯೂಸ್WILD ANIMAL : ಚಿರತೆ ಜೊತೆ ಸೆಲ್ಫಿ ಕೇಳಿದ ಭೂಪ : ಗಿಫ್ಟ್ ಕೊಟ್ಟು ಕಳಿಸಿದ...

WILD ANIMAL : ಚಿರತೆ ಜೊತೆ ಸೆಲ್ಫಿ ಕೇಳಿದ ಭೂಪ : ಗಿಫ್ಟ್ ಕೊಟ್ಟು ಕಳಿಸಿದ ಚಿರತೆ..!

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನಲ್ಲಿ  ಚಿರತೆಯೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಹೋಗಿ ವ್ಯಕ್ತಿಯೊಬ್ಬ ಅವಾಂತರ ಸೃಷ್ಟಿಸಿದ್ದಾನೆ.

ತಾಲೂಕಿನ ಹುಲ್ಲಹಳ್ಳಿ ಸಮೀಪದ ಯಲಳ್ಳಿ ಹಳ್ಳಿಯೊಂದಕ್ಕೆ ಏಕಾಏಕಿ ಚಿರತೆ ನುಗ್ಗಿದೆ. ಕೂಡಲೇ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಕೂಡಲೇ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖೆ ಅಧಿಕಾರಿಗಳು ಸುಮಾರು 4 ಗಂಟೆಗಳ ಕಾಲ ಕಾರ್ಯಾಚರಣೆ ಮಾಡಿ ಪಾಳುಬಿದ್ದ ಮನೆಯಲ್ಲಿ ಸೇರಿಕೊಂಡಿದ್ದ ಚಿರತೆಯನ್ನು ಸೆರೆ ಹಿಡಿದಿದ್ದಾರೆ.

ಈ ವೇಳೆ ಜಯಶಂಕರ್ ಎಂಬಾತ ಚಿರತೆ ಜೊತೆಗೆ ಸೆಲ್ಫಿ ತೆಗೆಯುವ ದುಸ್ಸಾಹಸ ಮಾಡಲು ಮುಂದಾಗಿದ್ದಾನೆ. ಅರವಳಿಕೆ ಚುಚ್ಚು ಮದ್ದು ನೀಡಿ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಸೆರೆ ಹಿಡಿಯುತ್ತಿದ್ದ ವೇಳೆ ಚಿರತೆ ಜೊತೆ ಸೆಲ್ಫಿ ತೆಗೆಯಲು ಹೋಗಿದ್ದು, ಕೂಡಲೇ ಚಿರತೆ ವ್ಯಕ್ತಿಯ ಮೇಲೆ ದಾಳಿ ಮಾಡಿದೆ. 

ಕೂಡಲೇ ಎಚ್ಚೆತ್ತ ಅರಣ್ಯ ಅಧಿಕಾರಿಗಳು ಯುವಕನನ್ನು ಚಿರತೆಯಿಂದ ರಕ್ಷಿಸಿ ಗಾಯಾಳನ್ನು ಮೈಸೂರಿನ ಕೆ.ಆರ್ ಆಸ್ಪತ್ರೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗ್ತಿದೆ. ಅಂತಿಮವಾಗಿ ಚಿರತೆ ಸೆರೆಯಾಗಿದ್ರಿಂದ ಗ್ರಾಮದ ಜನರು ನಿಟ್ಟುಸಿರು ಬಿಟ್ಟಿದ್ದಾರೆ.

ಹೆಚ್ಚಿನ ಸುದ್ದಿ