Sunday, January 25, 2026
Homeಬೆಂಗಳೂರುಮುನಿರತ್ನ ವಿರುದ್ಧ ಚುನಾವಣಾ ಅಖಾಡಕ್ಕಿಳಿಯಲಿರುವ ನಟ ಚೇತನ್ ಚಂದ್ರ

ಮುನಿರತ್ನ ವಿರುದ್ಧ ಚುನಾವಣಾ ಅಖಾಡಕ್ಕಿಳಿಯಲಿರುವ ನಟ ಚೇತನ್ ಚಂದ್ರ

ಬೆಂಗಳೂರು: ಸಿನಿಮಾ ನಟ ಚೇತನ್ ಚಂದ್ರ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಸಚಿವ ಮುನಿರತ್ನ ವಿರುದ್ಧ ಚುನಾವಣೆಯಲ್ಲಿ ಸ್ವತಂತ್ರ್ಯ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ಇರುವುದಾಗಿ ಸುದ್ದಿ ಹೊರಬಿದ್ದಿದೆ. ಶೀಘ್ರದಲ್ಲೇ ಈ ಕುರಿತು ನಟ ಚೇತನ್ ಚಂದ್ರ ಘೋಷಣೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.
ಇದುವರೆಗೂ ನಟ ಚೇತನ್ ಚಂದ್ರ 15 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಆದರೆ ಯಾವ ಸಿನಿಮಾಗಳೂ ಹೇಳಿಕೊಳ್ಳುವಂತಹ ಯಶಸ್ಸು ಕಂಡಿಲ್ಲ. ಪಿಯುಸಿ, ಪ್ರೇಮಿಸಂ, ರಾಜಧಾನಿ, ಕುಂಭರಾಶಿ, ಜಾತ್ರೆ, ಹುಚ್ಚುಡಗ್ರು, ಸಂಯುಕ್ತ 2 , ಪ್ಲಸ್ ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದಾರೆ.
ರಾಜಕೀಯ ಸ್ಥಿತಿಗತಿಗಳ ಬಗ್ಗೆ ಚಿತ್ರೀಕರಣಗೊಂಡಿರುವ “ಪ್ರಭುತ್ವ” ಸಿನಿಮಾ ಚುನಾವಣೆಗೂ ಮುನ್ನ ಬಿಡುಗಡೆಯಾಗುವ ಸಾಧ್ಯತೆಗಳಿವೆ. ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿಯಿಂದ ಮುನಿರತ್ನ ಕಣಕ್ಕಿಳಿಯುವ ಸಾಧ್ಯತೆಗಳಿದ್ದು, ಕಾಂಗ್ರೆಸ್ ಈಗಾಗಲೇ ಕುಸುಮಾ ಹನುಮಂತರಾಯಪ್ಪ ಅವರ ಹೆಸರನ್ನು ಅಂತಿಮಗೊಳಿಸಿದೆ.

ಹೆಚ್ಚಿನ ಸುದ್ದಿ

Change Language »
While viewing the website, tap in the menu bar. Scroll down the list of options, then tap Add to Home Screen.
Use Safari for a better experience.
error: Content is protected !!