Sunday, July 7, 2024
Homeಕ್ರೈಂRenukaswamy murder case : ಜೈಲಿನಲ್ಲಿ ನಟ ದರ್ಶನ್ ಭೇಟಿಗೆ ಯಾರಿಗೂ ಇಲ್ಲ ಅವಕಾಶ!

Renukaswamy murder case : ಜೈಲಿನಲ್ಲಿ ನಟ ದರ್ಶನ್ ಭೇಟಿಗೆ ಯಾರಿಗೂ ಇಲ್ಲ ಅವಕಾಶ!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಪರಪ್ಪನ ಅಗ್ರಹಾರದಲ್ಲಿರೋ ಸ್ಯಾಂಡಲ್‍ವುಡ್ ನಟ ದರ್ಶನ್‍ಗೆ ಬಿಗಿ ಭದ್ರತೆ ಒದಗಿಸಲಾಗಿದೆ. ಜೈಲಿನ ಇನ್ಸ್ ಪೆಕ್ಟರ್ ಮತ್ತು ಮೂವರು ಸಿಬ್ಬಂದಿ ಭದ್ರತೆ ನೀಡುತ್ತಿದ್ದಾರೆ. ದರ್ಶನ್ ನೋಡಲು ಜೈಲಿನ ಕೈದಿಗಳು ಬರವ ಸಾಧ್ಯತೆಗಳಿವೆ. ಹೀಗಾಗಿ ಬ್ಯಾರಕ್ 3 ಬಳಿ ಪೊಲೀಸರು ಬಂದೋಬಸ್ತ್ ಕೈಗೊಂಡಿದ್ದಾರೆ ಎನ್ನಲಾಗಿದೆ.

ಸೋಮವಾರ ದರ್ಶನ್ ಭೇಟಿಗೆ ಬಂದಿದ್ದ ಪತ್ನಿ ಹಾಗೂ ಮಗನ ಜೊತೆ 15 ನಿಮಿಷ ಭೇಟಿಗೆ ಅವಕಾಶ ನೀಡಲಾಗಿತ್ತು. ಅವರನ್ನು ಭೇಟಿ ಮಾಡಿ ವಿಶೇಷ ಆತಿಥ್ಯದ ಮೂಲಕ ಜೈಲಿನೊಳಗೆ ಪ್ರವೇಶಕ್ಕೆ ಅವಕಾಶ ಮಾಡಿಕೊಡುತ್ತಿದ್ದರು. ಇನ್ನು ನಟ ದರ್ಶನ್ ಸೆಲೆಬ್ರಿಟಿ ಆಗಿದ್ದರಿಂದ ಈ ವ್ಯವಸ್ಥೆ ಮಾಡಲಾಗುತ್ತಿದೆ ಎಂಬ ಮಾತು ಕೂಡ ಕೇಳಿಬರುತ್ತಿತ್ತು. ಇದೀಗ ದರ್ಶನ್ ಭೇಟಿಗೆ ಯಾರಿಗೂ ಅವಕಾಶವಿಲ್ಲ. ದರ್ಶನ್ ಯಾರ ಸಂಪರ್ಕಕ್ಕೂ ಸಿಗದಂತೆ ಜೈಲಾಧಿಕಾರಿಗಳು ಭದ್ರತೆ ವಹಿಸಿದ್ದಾರೆ.

ಇನ್ನು ಬ್ಯಾರಕ್ ನಲ್ಲಿ ತನ್ನ ಜೊತೆಗಿದ್ದವರ ಜೊತೆಯೇ ದರ್ಶನ್ ಸರಿಯಾಗಿ ಮಾತನಾಡುತ್ತಿಲ್ಲ. ಮಾನಸಿಕವಾಗಿ ಕುಗ್ಗಿರೋ ನಟ ಭದ್ರತಾ ಕೊಠಡಿಯಲ್ಲಿ ಮೌನಕ್ಕೆ ಜಾರಿದ್ದಾರೆ ಎಂಬ ಮಾಹಿತಿ ಕೂಡ ಲಭ್ಯವಾಗಿದೆ.

ಹೆಚ್ಚಿನ ಸುದ್ದಿ