ಶಿರಸಿ: ಅರಸೀಕೆರೆ ಜೆಡಿಎಸ್ ಶಾಸಕ ಕೆ.ಎಂ.ಶಿವಲಿಂಗೇಗೌಡ ಜೆಡಿಎಸ್ಗೆ ಗುಡ್ ಬೈ ಹೇಳೀದ್ದಾರೆ. ಇಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಶಿವಲಿಂಗೇಗೌಡ ಸಾವಿರಾರು ಬೆಂಬಲಿಗರು, ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರೊಂದಿಗೆ ಶಿರಸಿಗೆ ತೆರಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರ ನಿವಾಸಕ್ಕೆ ತೆರಳಿ ರಾಜಿನಾಮೆ ಸಲ್ಲಿಸಲಿರುವ ಅವರು ಕಾಂಗ್ರೆಸ್ ಪಕ್ಷ ಸೇರಲು ತಯಾರಿ ನಡೆಸಿದ್ದಾರೆ.