ಬೆಂಗಳೂರು: ಮೂರು ರಾಜ್ಯಗಳಲ್ಲಿ ಬಿಜೆಪಿ (bjp) ಅಭುತಪೂರ್ವ ಗೆಲುವು ದಾಖಲಿಸಿದ್ದು ಇದು ಮುಂಬರುವ ಲೋಕಸಭಾ ಚುನಾವಣೆಗೆ ಇದು ಸ್ಪಷ್ಟ ದಿಕ್ಸೂಚಿಯಾಗಿದೆ ಎಂದು ಜೆಡಿಎಸ್ (jds) ನಾಯಕ ಹೆಚ್.ಡಿ. ಕುಮಾರಸ್ವಾಮಿ (h.d. kumaraswamy) ಹೇಳಿದರು.
ಈ ಕುರಿತು ಟ್ವಿಟ್ ಮಾಡಿರುವ ಅವರು ಮಧ್ಯಪ್ರದೇಶ (madhyapradesh), ಛತ್ತೀಸಗಢ (chattisgrah)ಹಾಗೂ ರಾಜಸ್ಥಾನ (Rajasthan) ರಾಜ್ಯಗಳಲ್ಲಿ ಗೆಲುವು ಸಾಧಿಸಿದ ಬಿಜೆಪಿ ನಾಯಕರೆಲ್ಲರಿಗೂ ಶುಭ ಹಾರೈಸಿದ್ದಾರೆ.
ಪ್ರಧಾನಿ (pm) ನರೇಂದ್ರ ಮೋದಿ (narendra modi) ಅವರ ಬಲಿಷ್ಠ ನಾಯಕತ್ವದಲ್ಲಿ ಬಿಜೆಪಿ ಮೂರು ರಾಜ್ಯಗಳಲ್ಲಿ ವಿಜಯ ಪತಾಕೆ ಹಾರಿಸಿದೆ. ಈ ಫಲಿತಾಂಶ ಮುಂಬರುವ ಲೋಕಸಭೆ ಚುನಾವಣೆಗೆ ಸ್ಪಷ್ಟ ದಿಕ್ಸೂಚಿ ಎಂದು ಅವರು ತಿಳಿಸಿದ್ದಾರೆ.