ಬೆಂಗಳೂರು : ಪಂಚರಾಜ್ಯಗಳ ಚುನಾವಣೆ (Five state election) ನಡೆದು ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ (Election result) ಭಾನುವಾರ ಹೊರಬಿದ್ದಿದೆ. ತೆಲಂಗಾಣ (Telangana) ಹೊರತು ಪಡಿಸಿ ಮೂರು ರಾಜ್ಯಗಳಲ್ಲಿ ಬಿಜೆಪಿ (BJP) ಜಯ ಸಾಧಿಸಿದ್ದು, ಇದು ಕಾಂಗ್ರೆಸ್ (Congress) -ಬಿಜೆಪಿ ನಡುವಿನ ವಾಕ್ಸಮರಕ್ಕೂ ಸಹ ಕಾರಣವಾಗಿದೆ.
ಕೆಲದಿನಗಳ ಹಿಂದಷ್ಟೇ ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadish Shettar) ಪಂಚರಾಜ್ಯಗಳ ಚುನಾವಣೆ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ನಾನು ಪಕ್ಷಾಂತರ ಮಾಡಿದ್ದು ಪಂಚರಾಜ್ಯಗಳ ಚುನಾವಣೆಯ ಮೇಲೆ ಪರಿಣಾಮ ಬೀರಲಿದೆ ಎಂದು ಹೇಳಿದ್ದರು. ಈ ಹೇಳಿಕೆ ಈಗ ಬಿಜೆಪಿ ನಾಯಕರಿಂದ ಲೇವಡಿಗೊಳಗಾಗಿದೆ.
ಬಿಜೆಪಿ ನಾಯಕ ಎಕ್ಸ್ ಖಾತೆಯ ಮೂಲಕ ಜಗದೀಶ್ ಶೆಟ್ಟರ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ. ಜಗದೀಶ್ ಶೆಟ್ಟರ್ ಅವರ ಹೇಳಿಕೆಯ ಮಾಧ್ಯಮ ವರದಿಯನ್ನು ಉಲ್ಲೇಖಿಸಿ ಹೌದು ಜಗದೀಶ್ ಶೆಟ್ಟರ್ ಅವರೇ ಭಾರೀ ಪರಿಣಾಮ ಬೀರಿದೆ ಎಂದು ಅವರ ಕಾಲೆಳೆದಿದ್ದಾರೆ.
ಕರ್ನಾಟಕ ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿ ಬಿಜೆಪಿಯಿಂದ ಟಿಕೆಟ್ ನೀಡದ ಕಾರಣಕ್ಕೆ ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದ ಜಗದೀಶ್ ಶೆಟ್ಟರ್ ತಮ್ಮ ತವರೂರಿನಲ್ಲೇ ಸೋತು ಮುಖಭಂಗ ಅನುಭವಿಸಿದ್ದರು.
ಹೌದು ಪರಿಣಾಮ ಬೀರಿದೆ ಶ್ರೀ @JagadishShettar ರವರೆ. pic.twitter.com/6oKNuuwItR
— Basanagouda R Patil (Yatnal) (@BasanagoudaBJP) December 3, 2023