Sunday, July 7, 2024
Homeಟಾಪ್ ನ್ಯೂಸ್Valmiki corporation scandal : ವಾಲ್ಮೀಕಿ ನಿಗಮ ಹಗರಣ ಈಗ ಸಿಎಂ ಬುಡಕ್ಕೆ ಬಂದಿದೆ...

Valmiki corporation scandal : ವಾಲ್ಮೀಕಿ ನಿಗಮ ಹಗರಣ ಈಗ ಸಿಎಂ ಬುಡಕ್ಕೆ ಬಂದಿದೆ – ವಿಜಯೇಂದ್ರ ಆರೋಪ

ವಾಲ್ಮೀಕಿ ನಿಗಮದಲ್ಲಿ ನಡೆದ ಹಗರಣದಲ್ಲಿ ಈಗಾಗಲೇ ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ ಸಲ್ಲಿಸಿದ್ದಾರೆ. ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಬುಧವಾರ ಸಿಎಂ ಸಿದ್ದರಾಮಯ್ಯ ಅವರ ಗೃಹ ಕಚೇರಿಗೆ ಮುತ್ತಿಗೆ ಹಾಕುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ನಿಗಮದ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಯಾವಾಗ ಬೇಕಾದರೂ ಅರೆಸ್ಟ್ ಆಗಬಹುದು. ಅವರು ಬಂಧಿಸಲ್ಪಟ್ಟರೆ ಪ್ರಕರಣ ಸಿಎಂ ಬುಡಕ್ಕೆ ಬರುತ್ತದೆ. ಹೀಗಾಗಿ ನೈತಿಕ ಹೊಣೆ ಹೊತ್ತು ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಬೇಕು ಎಂದರು.

ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಊಟಿ ಮಾಡಿ ಬೇರೆ ರಾಜ್ಯಗಳಿಗೆ ಕಳುಹಿಸಿಕೊಡುತ್ತಿದೆ. ಲೋಕಸಭಾ ಚುನಾವಣೆಯಲ್ಲಿ ತೆಲಂಗಾಣ ಮತ್ತು ಆಂಧ‍್ರಪ್ರದೇಶಗಳಿಗೆ ಹಣ ಕಳುಹಿಸಿದ್ದು ಎಲ್ಲರಿಗೂ ಗೊತ್ತಿದೆ. ಆದ್ದರಿಂದ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದರು.

ನಂತರ ಸಿಎಂ ನಿವಾಸಕ್ಕೆ ಮೆರವಣಿಗೆ ಮೂಲಕ ತೆರಳಿದ ಬಿಜೆಪಿ ನಾಯಕರು ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಬಿಜೆಪಿ ನಾಯಕರು ಹಾಗೂ ಪೊಲೀಸರ ನಡುವೆ ವಾಗ್ವಾದ ಉಂಟಾಯಿತು.

ಹೆಚ್ಚಿನ ಸುದ್ದಿ