ಬೆಳಗಾವಿ: ಆಸ್ತಿಗಾಗಿ ತಮ್ಮ ವಿರುದ್ಧ ವಾಮಾಚಾರ ನಡೆಸಿದ್ದಾರೆ ಎಂದು ಆರೋಪಿಸಿ ಉದ್ಯಮಿ ವಿಜಯ ಸಂಕೇಶ್ವರ ಅವರ ಪುತ್ರಿ ದೀಪಾ ಸಿದ್ನಾಳ ತಮ್ಮ ಕುಟುಂಬದ ವಿರುದ್ಧವೇ ದೂರು ದಾಖಲಿಸಿದ್ದಾರೆ.
ದೀಪಾ ಸಿದ್ನಾಳ ಅವರು ಉದ್ಯಮಿ ಶಶಿಕಾಂತ ಸಿದ್ನಾಳ, ಪತ್ನಿ ವಾಣಿ ಸಿದ್ನಾಳ ಹಾಗೂ ಪುತ್ರ, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ದಿಗ್ವಿಜಯ ಸಿದ್ನಾಳ ವಿರುದ್ಧ ಬೆಳಗಾವಿ ನಗರದ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮಾಜಿ ಸಂಸದ ಎಸ್ಬಿ ಸಿದ್ನಾಳ ಅವರ ಪುತ್ರ ಶಿವಕಾಂತ ಸಿದ್ನಾಳ ಇತ್ತೀಚೆಗೆ ನಿಧನರಾಗಿದ್ದಾರೆ. ಇವರ ಒಡೆತನದ ವಿಜಯಕಾಂತ ಡೈರಿಯನ್ನು ಸಹೋದರ ಶಶಿಕಾಂತ ಸಿದ್ನಾಳ ಅವರ ಕುಟುಂಬ ಕಬಳಿಸುವ ಸಲುವಾಗಿ ಹುನ್ನಾರ ನಡೆಸಿ ತಮ್ಮ ವಿರುದ್ಧ ವಾಮಾಚಾರ ನಡೆಸಿದ್ದಾರೆ. ತಮ್ಮ ಪತಿ ಶಿವಕಾಂತ ಅವರ ಸಮಾಧಿಯ ಮೇಲೂ ವಾಮಾಚಾರ ನಡೆಸಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ.