ಬೆಂಗಳೂರು : ಟರ್ಫ್ ಕ್ಲಬ್ ಸ್ಟೀವರ್ಡ್ ಹುದ್ದೆಗೆ ಕಿಕ್ ಬ್ಯಾಕ್ ಪಡೆದ ಆರೋಪ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಪ್ರಕರಣದ ತನಿಖೆ ನಡೆಸಿದ್ದ ಲೋಕಾಯುಕ್ತ, ಸಿದ್ದರಾಮಯ್ಯ ಅವರು ಹಣ ಪಡೆದಿಲ್ಲ ಎಂದು ‘ಬಿ’ ರಿಪೋರ್ಟ್ ಸಲ್ಲಿಸಿದ್ದನ್ನು ಕೋರ್ಟ್ ಅಂಗೀಕರಿಸಿದೆ. ಈ ಹಿನ್ನೆಲೆಯಲ್ಲಿ ಸಿಎಂಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಈ ಪ್ರಕರಣದಲ್ಲಿ ರಿಲೀಫ್ ನೀಡಿದೆ.
ಕಿಕ್ ಬ್ಯಾಕ್ ಪಡೆಯಲಾಗಿದೆ ಎಂದು ಆರೋಪಿಸಿ ಬಿಜೆಪಿ ಮುಖಂಡ ಎನ್ಆರ್ ರಮೇಶ್ ಅವರು ಈ ಹಿಂದೆ ಕೋರ್ಟ್ಗೆ ಖಾಸಗಿ ದೂರು ನೀಡಿದ್ದರು.
ಸಿದ್ದರಾಮಯ್ಯ ಅವರು ಈ ಮೊದಲು ಸಿಎಂ ಆಗಿದ್ದಾಗ ರೂ.1.30 ಕೋಟಿ ಹಣ ಪಡೆದು 2014ರಲ್ಲಿ ಟರ್ಫ್ ಸ್ಟೀವರ್ಡ್ ಹುದ್ದೆಗೆ ವಿವೇಕಾನಂದ ಎಂಬುವವರನ್ನು ನೇಮಕ ಮಾಡಿದ್ದಾರೆ ಎಂದು ಆರೋಪಿಸಿದ್ದರು. ದೂರಿನ ಅರ್ಜಿ ತಿರಸ್ಕರಿಸಿರುವ 82ನೇ ಸಿಸಿಹೆಚ್ ಕೋರ್ಟ್, ಲೋಕಾಯುಕ್ತ ಸಲ್ಲಿಸಿದ ‘ಬಿ’ ರಿಪೋರ್ಟ್ ಅಂಗೀಕರಿಸಿ ಆದೇಶ ಹೊರಡಿಸಿದೆ.