ನವದೆಹಲಿ: ಪಾಕಿಸ್ತಾನವು ಹಲವಾರು ಸ್ಥಳಗಳ ಮೇಲೆ ಕ್ಷಿಪಣಿಗಳನ್ನು ಹಾರಿಸಿದ ನಂತರ ಭಾರತವು ಲಾಹೋರ್ ಮತ್ತು ಸಿಯಾಲ್ಕೋಟ್ ಮೇಲೆ ದಾಳಿ ಮಾಡಿದೆ.
ಪಾಕಿಸ್ತಾನದ ವಿಫಲ ದಾಳಿಗಳಿಗೆ ಪ್ರತಿಯಾಗಿ, ಭಾರತೀಯ ಸೇನೆಯು ಲಾಹೋರ್ ಮೇಲೆ ಡ್ರೋನ್ ದಾಳಿಯನ್ನು ನಡೆಸಿದೆ. ಭಾರತದ ದಾಳಿಗೆ ಲಾಹೋರ್ ಅಲ್ಲೋಲ ಕಲ್ಲೋಲವಾಗಿದೆ.
ಪಾಕಿಸ್ತಾನವು ಅನೇಕ ಸ್ಥಳಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸಿದ ನಂತರ ಭಾರತವು ಪಾಕಿಸ್ತಾನ ವಾಯುಪಡೆಯ F-16 ಮತ್ತು JF-17 ಅನ್ನು ಹೊಡೆದುರುಳಿಸಿದೆ. ಇಂದು ರಾತ್ರಿ ರಾಜಸ್ಥಾನದ ಜೈಸಲ್ಮೇರ್ ಪ್ರದೇಶದಲ್ಲಿ ಪಾಕಿಸ್ತಾನ ಕ್ಷಿಪಣಿ ದಾಳಿಗೆ ಪ್ರಯತ್ನಿಸಿತು, ಇದಕ್ಕೆ ಭಾರತದ ವಾಯು ರಕ್ಷಣಾ ವ್ಯವಸ್ಥೆಯಿಂದ ತ್ವರಿತ ಪ್ರತಿಕ್ರಿಯೆ ದೊರೆಯಿತು.
ಪಾಕಿಸ್ತಾನವು ಡ್ರೋನ್ಗಳನ್ನು ಬಳಸಿಕೊಂಡು ಜಮ್ಮು ವಿಮಾನ ನಿಲ್ದಾಣ ಮತ್ತು ರೈಲು ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ ನಡೆಸಲು ಪ್ರಯತ್ನಿಸಿತ್ತು.
ಇನ್ನು ಪಾಕಿಸ್ತಾನದ ವಿರುದ್ಧ ಭಾರತ ಪ್ರತೀಕಾರದ ಕ್ರಮ ಕೈಗೊಳ್ಳುತ್ತಿರುವ ನಡುವೆಯೇ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸಿಡಿಎಸ್ ಮತ್ತು ಮೂರು ಸೇನೆಗಳ ಮುಖ್ಯಸ್ಥರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ.