ಮಂಗಳೂರು : ಕಟ್ಟಡ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಮಣ್ಣು ಕುಸಿದು ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ
ಮಂಗಳೂರಿನ ಬಲ್ಮಠ ರಸ್ತೆಯಲ್ಲಿ ನಿರ್ಮಾಣವಾಗುತ್ತಿದ್ದ ಕಟ್ಟಡ ಕಾಮಗಾರಿಯ ವೇಳೆ ಈ ಅವಘಡ ಸಂಭವಿಸಿದೆ.
ರೋಹನ್ ಕಾರ್ಪೊರೇಷನ್ ಲಿಮಿಟೆಡ್ ಎಂಬ ಸಂಸ್ಥೆಗೆ ಸೇರಿದ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ಈ ದುರ್ಘಟನೆ ನಡೆದಿದ್ದು ಮಣ್ಣಿನಲ್ಲಿ ಇಬ್ಬರು ಕಾರ್ಮಿಕರು ಸಿಲುಕಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ
ಈಗಾಗಲೇ ರಕ್ಷಣಾ ಕಾರ್ಯಾಚರಣೆಗೆಂದು ಸಿಬ್ಬಂದಿ ಹಾಗೂ ಆರೋಗ್ಯ ಸಿಬ್ಬಂದಿಯೂ ಕೂಡ ಆಂಬುಲೆನ್ಸ್ ನೊಂದಿಗೆ ಸ್ಥಳಕ್ಕೆ ಆಗಮಿಸಿದ್ದಾರೆ. ಮಣ್ಣಿನಡಿ ಇಬ್ಬರು ಕಾರ್ಮಿಕರು ಸಿಲುಕಿರುವುದು ಭಾಗಶಃ ಕಾಣುತ್ತಿದ್ದು ಇವರನ್ನು ರಕ್ಷಿಸಲು ಸಿಬ್ಬಂದಿ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ.