Wednesday, May 14, 2025
Homeಕ್ರೈಂBREAKING : ನಟ ದರ್ಶನ್​​​ಗೆ ಸಂಕಷ್ಟ.. ಜಾಮೀನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಕೆಗೆ ಖಾಕಿ ಸಿದ್ಧತೆ

BREAKING : ನಟ ದರ್ಶನ್​​​ಗೆ ಸಂಕಷ್ಟ.. ಜಾಮೀನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಕೆಗೆ ಖಾಕಿ ಸಿದ್ಧತೆ

ಬೆಂಗಳೂರು : ರೇಣುಕಾಸ್ವಾಮಿಯ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್​​ ನಿನ್ನೆಯಷ್ಟೇ (ಅ.30) ಬಳ್ಳಾರಿ ಜೈಲಿನಿಂದ ಮಧ್ಯಂತರ ಜಾಮೀನಿನ ಮೇಲೆ ಹೊರ ಬಂದಿದ್ದು, ಇದರ ಬೆನ್ನಲ್ಲೇ ದಾಸನಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ದರ್ಶನ್​​​ಗೆ ಆರೋಗ್ಯ ಸಮಸ್ಯೆಯ ಕಾರಣದಿಂದ ಹೈಕೋರ್ಟ್​​​​​​ 6 ವಾರಗಳ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದನ್ನು ಪ್ರಶ್ನಿಸಿ ಪೊಲೀಸರು ಸುಪ್ರೀಂಕೋರ್ಟ್​​ಗೆ ಮೇಲ್ಮನವಿ ಸಲ್ಲಿಸಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

ಸೋಮವಾರ ಸುಪ್ರೀಂಕೋರ್ಟ್​​​ಗೆ ಪೊಲೀಸರು ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರಂತೆ. ಮೇಲ್ಮನವಿ ಸಲ್ಲಿಸುವ ಕುರಿತಾಗಿ ಈಗಾಗಲೇ ಕಮಿಷನರ್​ ಬಿ.ದಯಾನಂದ್ ಅವರ ಬಳಿ ಪೊಲೀಸರು ಒಂದು ಸುತ್ತಿನ ಸಭಯೆನ್ನೂ ಮಾಡಿದ್ದಾರೆಂದು ಹೇಳಲಾಗುತ್ತಿದೆ.

ಹೆಚ್ಚಿನ ಸುದ್ದಿ

error: Content is protected !!