ಬೆಂಗಳೂರು : ವಿದ್ಯಾರ್ಥಿಯೋರ್ವ ಕಾಲೇಜು ಸೆಕ್ಯೂರಿಟಿ ಗಾರ್ಡನ್ನು ಚಾಕುವಿನಿಂದ ಇರಿದು ಕೊಂದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಜೈ ಕಿಶೋರ್ ರಾಯ್ ಮೃತ ಸೆಕ್ಯೂರಿಟಿ ಗಾರ್ಡ್
ಬೆಂಗಳೂರಿನ ಕೆಂಪಾಪುರದಲ್ಲಿರುವ ಸಿಂಧಿ ಕಾಲೇಜು ವಿದ್ಯಾರ್ಥಿ ಭಾರ್ಗವ್ ಇಂದು ಮದ್ಯ ಸೇವಿಸಿ ಕಾಲೇಜಿಗೆ ಆಗಮಿಸಿದ್ದ. ಈ ವೇಳೆ ಆತನನ್ನು ತಡೆದ ಸೆಕ್ಯೂರಿಟಿ ಗಾರ್ಡ್ ಜೈ ಕಿಶೋರ್ ರಾಯ್, ಕಾಲೇಜಿನೊಳಗೆ ಹೋಗದಂತೆ ಭಾರ್ಗವನನ್ನು ತಡೆದಿದ್ದಾನೆ. ಇದರಿಂದ ಸಿಟ್ಟಿಗೆದ್ದ ವಿದ್ಯಾರ್ಥಿ ಭಾರ್ಗವ್, ಚಾಕುವಿನಿಂದ ಇರಿದು ಸೆಕ್ಯೂರಿಟಿ ಗಾರ್ಡ್ನ ಹತ್ಯೆಗೈದಿದ್ದಾನೆ
ಭಾರ್ಗವ್ ಅಂತಿಮ ವರ್ಷದ ಬಿಎ ವ್ಯಾಸಂಗ ಮಾಡುತ್ತಿದ್ದ. ಇಂದು ಮಧ್ಯಾಹ್ನ 3:30ರ ಸುಮಾರಿಗೆ ಈ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ
ಅಮೃತ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ವಿದ್ಯಾರ್ಥಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಗೊಳಪಡಿಸಿದ್ದಾರೆ