Sunday, July 7, 2024
Homeಟಾಪ್ ನ್ಯೂಸ್Breaking :  ಚಾಮರಾಜನಗರದ ಅಭ್ಯರ್ಥಿ ಹೆಸರು ಘೋಷಿಸಿದ ಕಾಂಗ್ರೆಸ್‌

Breaking :  ಚಾಮರಾಜನಗರದ ಅಭ್ಯರ್ಥಿ ಹೆಸರು ಘೋಷಿಸಿದ ಕಾಂಗ್ರೆಸ್‌

ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ (Lokasabha Election) ಚಾಮರಾಜನಗರದಿಂದ (Chamarajanagar) ಸುನಿಲ್‌ ಬೋಸ್‌ (Sunil Bose) ಅವರನ್ನು ಕಣಕ್ಕಿಳಿಸುವುದಾಗಿ ಕಾಂಗ್ರೆಸ್‌ (Congress) ಘೋಷಿಸಿದೆ. ಸುನಿಲ್‌ ಬೋಸ್‌ ಅವರು ಸಚಿವ ಎಚ್‌.ಸಿ. ಮಹದೇವಪ್ಪ (H C Mahadevappa) ಅವರ ಪುತ್ರರಾಗಿದ್ದಾರೆ.

ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ಕ್ಷೇತ್ರವನ್ನು ಹೊಂದಿರುವ ಚಾಮರಾಜನಗರ ಕ್ಷೇತ್ರವು ಕಾಂಗ್ರೆಸ್‌ ಮತ್ತು ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿ ಮಾರ್ಪಾಡಾಗಿತ್ತು. ಇಲ್ಲಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರನ್ನೇ ಕಣಕ್ಕಿಳಿಸಲಿದ್ದಾರೆ ಎಂಬ ಮಾತೂ  ಸಹ ಕೇಳಿಬಂದಿತ್ತು. ಆದರೆ ಶಾಸಕರಾದ ದರ್ಶನ್‌ ಧ್ರುವನಾರಾಯಣ ಸೇರಿದಂತೆ ಹಲವರು ಸುನಿಲ್‌ ಅವರಿಗೆ ಟಿಕೆಟ್‌ ನೀಡಬೇಕೆಂದು ಒತ್ತಾಯಿಸಿದ್ದರು.

ಚಾಮರಾಜನಗರದಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿರುವ ಲಿಂಗಾಯಿತ ಮತ್ತು ದಲಿತ ಸಮುದಾಯಗಳ ಮತಗಳನ್ನು ಪಡೆಯುವ ಹವಣಿಕೆಯಲ್ಲಿರುವ ಬಿಜೆಪಿ ಮತ್ತು ಕಾಂಗ್ರೆಸ್‌ ಅಳೆದೂ ತೂಗಿ ಸಮರ್ಥ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಲು ನಿರ್ಧರಿಸಿತ್ತು.

ಹೆಚ್ಚಿನ ಸುದ್ದಿ