Thursday, April 16, 2026
Homeಕ್ರೈಂCRIME: ಹಸುಗಳ‌ ಶೆಡ್​​ಗೆ ಬೆಂಕಿ ಹಾಕಿದ ಕಿರಾತಕ, ಸಿಸಿಟಿವಿ ಬಿಚ್ಚಿಟ್ಟ ಭಯಾನಕ ಸತ್ಯ: VIDEO

CRIME: ಹಸುಗಳ‌ ಶೆಡ್​​ಗೆ ಬೆಂಕಿ ಹಾಕಿದ ಕಿರಾತಕ, ಸಿಸಿಟಿವಿ ಬಿಚ್ಚಿಟ್ಟ ಭಯಾನಕ ಸತ್ಯ: VIDEO

ಬೆಂಗಳೂರು: ಡಿಜೆ ಹಳ್ಳಿ (Crime) ವ್ಯಾಪ್ತಿಯ ಶಾಂಪುರ ರಸ್ತೆಯಲ್ಲಿ ಮಂಗಳವಾರ ನಡೆದ ಅಗ್ನಿ ಅವಘಡದಲ್ಲಿ ಆರು ಹಸುಗಳು ಸಜೀವ ದಹನವಾಗಿದೆ. ಆದರೆ ಇದೀಗ ಈ ಘಟನೆಗೆ ಹೊಸ ಟ್ವಿಸ್ಟ್ ಸಿಕ್ಕಿದೆ. ಹೌದು, ಮೊದಲು ಈ ಘಟನೆಯನ್ನ ಆಕಸ್ಮಿಕ ಬೆಂಕಿ ಎಂದು ಭಾವಿಸಲಾಗಿತ್ತು. ಆದರೆ, ಕಿರಾತಕನೊಬ್ಬ ಬೇಕಂತಲೇ ಹಸುಗಳಿದ್ದ ಶೆಡ್‌ಗೆ ಬೆಂಕಿ ಹಚ್ಚಿ ಓಡಿಹೋಗುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಆರು ಮೂಕಜೀವಿಗಳ ಬಲಿ

ಶೆಡ್‌ನಲ್ಲಿ ಒಟ್ಟು 20 ಹಸುಗಳಿದ್ದವು. ದುಷ್ಕರ್ಮಿ ಬೆಂಕಿ ಹಚ್ಚಿದ ಪರಿಣಾಮ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ ಆರು ಹಸುಗಳು ನರಳಿ ಪ್ರಾಣ ಬಿಟ್ಟಿವೆ. ಉಳಿದ ಹಸುಗಳನ್ನು ಸಮಯಪ್ರಜ್ಞೆಯಿಂದ ರಕ್ಷಿಸಲಾಗಿದೆಯಾದರೂ, ಆರು ಮೂಕಜೀವಿಗಳು ಬೆಂಕಿಯ ಜ್ವಾಲೆಗೆ ಬಲಿಯಾಗಿರುವುದು ಸ್ಥಳೀಯರಲ್ಲಿ ತೀವ್ರ ಆಕ್ರೋಶ ಮತ್ತು ಬೇಸರ ಮೂಡಿಸಿದೆ.

 

 ಸಿಸಿಟಿವಿಯಲ್ಲಿ ಸೆರೆಯಾಯ್ತು ವಿಕೃತಿ

ಘಟನೆಯ ನಂತರ ಪೊಲೀಸರು ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಅಸಲಿ ಸತ್ಯ ಬೆಳಕಿಗೆ ಬಂದಿದೆ. ಅಪರಿಚಿತ ವ್ಯಕ್ತಿಯೊಬ್ಬ ಗುಟ್ಟಾಗಿ ಬಂದು ಹಸುಗಳಿದ್ದ ಶೆಡ್‌ಗೆ ಬೆಂಕಿ ಹಚ್ಚಿ ಅಲ್ಲಿಂದ ಪರಾರಿಯಾಗುವ ದೃಶ್ಯ ಸ್ಪಷ್ಟವಾಗಿ ಸೆರೆಯಾಗಿದೆ. ಹಳೆಯ ದ್ವೇಷಕ್ಕಾಗಿ ಅಥವಾ ವಿಕೃತ ಮನಸ್ಥಿತಿಯಿಂದ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.

 

ಪೊಲೀಸರಿಂದ ತನಿಖೆ ಚುರುಕು

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಡಿಜೆ ಹಳ್ಳಿ ಪೊಲೀಸರು, ಸಿಸಿಟಿವಿ ದೃಶ್ಯದ ಆಧಾರದ ಮೇಲೆ ಆರೋಪಿಯ ಪತ್ತೆಗೆ ತನಿಖೆ ಚುರುಕುಗೊಳಿಸಿದ್ದಾರೆ. ಮೂಕ ಪ್ರಾಣಿಗಳನ್ನು ಬಲಿಪಡೆದ ಆ ಕಿರಾತಕನಿಗಾಗಿ ಪೊಲೀಸರು ಬಲೆ ಬೀಸಿದ್ದು, ಶೀಘ್ರವೇ ಬಂಧಿಸುವ ಭರವಸೆ ನೀಡಿದ್ದಾರೆ.


ಮಂಚದ ಪೆಟ್ಟಿಗೆಯಲ್ಲಿತ್ತು ಮಹಿಳೆಯ ಕೊಳೆತ ಶವ, ದೆಹಲಿಯಲ್ಲಿ ಬೆಚ್ಚಿಬೀಳಿಸುವ ಕೃತ್ಯ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ಅತ್ಯಂತ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ನಾಪತ್ತೆಯಾಗಿದ್ದ ಮಹಿಳೆಯೊಬ್ಬರ (Woman) ಮೃತದೇಹವು (Dead body) ಮಂಚದ ಬಾಕ್ಸ್ ಒಳಗೆ ಪತ್ತೆಯಾಗಿದೆ. ಈ ಘೋರ ಕೃತ್ಯಕ್ಕೆ ಸಂಬಂಧಿಸಿದಂತೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಮನೆಯಿಂದ ದುರ್ವಾಸನೆ ಬರಲಾರಂಭಿಸಿದಾಗ ಸ್ಥಳೀಯರು ನೀಡಿದ ಮಾಹಿತಿಯ ಮೇರೆಗೆ ತನಿಖೆ ನಡೆಸಿದಾಗ ಈ ಭೀಕರ ಕೊಲೆ ಪ್ರಕರಣ ಜಗತ್ತಿಗೆ ತಿಳಿದಿದೆ.

ಇನ್ನು ಪ್ರಾಥಮಿಕ ತನಿಖೆಯ ಪ್ರಕಾರ, ಕೊಲೆ ಮಾಡಿದ ನಂತರ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಮೃತದೇಹವನ್ನು ಬೆಡ್ ಬಾಕ್ಸ್‌ನಲ್ಲಿ ಅಡಗಿಸಿಡಲಾಗಿತ್ತು. ಆರೋಪಿಗಳು ಹತ್ಯೆಯ ನಂತರ ತಲೆಮರೆಸಿಕೊಳ್ಳಲು ಪ್ರಯತ್ನಿಸಿದ್ದರು, ಆದರೆ ತಾಂತ್ರಿಕ ಸಾಕ್ಷ್ಯಗಳ ಆಧಾರದ ಮೇಲೆ ಪೊಲೀಸರು ಅವರನ್ನು ಬೆನ್ನಟ್ಟಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಕೃತ್ಯ ನಡೆದ ಸ್ಥಳದಲ್ಲಿ ದೊರೆತ ಸಣ್ಣ ಸುಳಿವುಗಳು ಮತ್ತು ಸಿಸಿಟಿವಿ ದೃಶ್ಯಾವಳಿಗಳು ಆರೋಪಿಗಳ ಪತ್ತೆಗೆ ನೆರವಾಗಿವೆ. ಅಪರಾಧ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿ, ಕೊಲೆಗೆ ಬಳಸಲಾದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಇಂತಹ ಕ್ರೂರ ಘಟನೆಗಳು ಸಮಾಜದಲ್ಲಿ ವ್ಯಕ್ತಿಗಳ ಸುರಕ್ಷತೆಯ ಬಗ್ಗೆ ತೀವ್ರ ಆತಂಕವನ್ನು ಮೂಡಿಸಿದ್ದು, ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ನಿಟ್ಟಿನಲ್ಲಿ ಕಾನೂನು ಪ್ರಕ್ರಿಯೆಗಳನ್ನು ವೇಗಗೊಳಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಜಾತ್ರೆಯಲ್ಲಿ ಕುಣಿದಿದ್ದಕ್ಕೆ ವ್ಯಕ್ತಿಯ ಭೀಕರ ಕೊ*ಲೆ; ಎಂಟು ಜನರ ಬಂಧನ

ಹೆಚ್ಚಿನ ಸುದ್ದಿ

Change Language »
error: Content is protected !!