ಬೆಂಗಳೂರು: ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಕೇಂದ್ರ ಕಾರಾಗೃಹ ಸೇರಿದ್ದಾರೆ. ಜೈಲಿನ ಸಿಬ್ಬಂದಿ ಬಳಿ ಬಿಸಿ ನೀರನ್ನು ಕೇಳಿ ದರ್ಶನ್ ಪಡೆದಿದ್ದಾರೆ. ಬಳಿಕ ಕೆಲ ಹೊತ್ತು ಬ್ಯಾರಾಕ್ನಲ್ಲಿಯೇ ನಟ ದರ್ಶನ್ ವಾಕಿಂಗ್ ಮಾಡಿದ್ದಾರೆ.
ದರ್ಶನ್ ಗೆ ಪರಪ್ಪನ ಅಗ್ರಹಾರದಲ್ಲಿ ಊಟ ಸೇರುತ್ತಿಲ್ಲ. ಹೀಗಾಗಿ ಹಂತ ಹಂತವಾಗಿ ದೇಹದ ತೂಕ ಕಳೆದುಕೊಳ್ಳುತ್ತಿದ್ದಾರೆ ಎನ್ನುವ ವಿಷಯ ಸೊಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
ಮಂಗಳವಾರ ರಾತ್ರಿ ಬೇಗನೇ ಮಲಗಿದ ದರ್ಶನ್ ಮರುದಿನ ಬೆಳಿಗ್ಗೆ 5.30ಕ್ಕೆ ಎದ್ದಿದ್ದಾರೆ. ಬಳಿಕ ಬಿಸಿ ನೀರನ್ನು ಕೇಳಿ ಪಡೆದಿದ್ದಾರೆ. ಜೂನ್ 25ರಂದು ದರ್ಶನ್ ಅವರು ಪತ್ನಿ, ಮಗನ ಭೇಟಿ ಮಾಡಿದ್ದಾರೆ. ಆ ಬಳಿಕ ದರ್ಶನ್ ಸ್ವಲ್ಪ ರಿಲ್ಯಾಕ್ಸ್ ಮೂಡ್ನಲ್ಲಿ ಇದ್ದಾರೆ.
ಆದರೆ ದರ್ಶನ್ಗೆ ಜೈಲೂಟ ಒಗ್ಗುತ್ತಿಲ್ಲ. ಅನಿವಾರ್ಯವಾಗಿ ಇದನ್ನು ಸೇವಿಸಬೇಕಾದ ಸ್ಥಿತಿ ಬಂದೊದಗಿದೆ. ದಿನ ಕಳೆದಂತೆ ಅವರು ತೂಕ ಕಳೆದುಕೊಳ್ಳುತ್ತಿದ್ದಾರೆ. ಜೈಲಿನಲ್ಲಿ ಇತರರ ಜತೆ ಅಷ್ಟಾಗಿ ಬೆರೆಯದೆ ದರ್ಶನ್ ಒಂಟಿಯಾಗಿ ಕುಳಿತಿದ್ದಾರೆ.