Sunday, July 7, 2024
Homeಕ್ರೈಂDarshan Arrest: ಒಳ್ಳೆ ಸಮಯ ಬರಲಿದೆ - ದರ್ಶನ್ ಪರ ದನಿಯೆತ್ತಿದ ಸುಮಲತಾ!

Darshan Arrest: ಒಳ್ಳೆ ಸಮಯ ಬರಲಿದೆ – ದರ್ಶನ್ ಪರ ದನಿಯೆತ್ತಿದ ಸುಮಲತಾ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಪರಪ್ಪನ ಅಗ್ರಹಾರ ಸೇರಿದ್ದಾರೆ. ಈಗಾಗಲೇ ಕೆಲವು ನಟ ನಟಿಯರು ದರ್ಶನ್‌ ಭೇಟಿ ಮಾಡುವ ಪ್ರಯತ್ನ ಮಾಡಿದ್ದಾರೆ. ಇನ್ನೂ ಕೆಲವರು ದರ್ಶನ್‌ ಪರ ಧ್ವನಿ ಎತ್ತಿದ್ದಾರೆ.

ಹೌದು, ದರ್ಶನ್ ನನ್ನ ದೊಡ್ಡ ಮಗ ಎಂದೇ ಹೇಳುತ್ತಿದ್ದ ಮಾಜಿ ಸಂಸದೆ ಸುಮಲತಾ ಅಂಬರೀಷ್‌ ಘಟನೆಯ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದೆ ಇರುವುದದರ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿತ್ತು. ಇದರ ನಡುವೆ ಸುಮಲತಾ ಅಂಬರೀಷ್‌ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಾಕಿದ ಪೋಸ್ಟ್‌ ಎಲ್ಲರ ಗಮನ ಸೆಳೆದಿದೆ.

ಭಗವದ್ಗೀತೆ ಶ್ಲೋಕ ಹಂಚಿಕೊಂಡಿರುವ ಸುಮಲತಾ ಅಂಬರೀಷ್‌ ಪರೋಕ್ಷವಾಗಿ ದರ್ಶನ್‌ ಪರ ಧ್ವನಿ ಎತ್ತಿದ್ದಾರೆ ಎನ್ನಲಾಗುತ್ತಿದೆ. ‘ಎಲ್ಲವೂ ಸರಿ ಹೋಗುವ ಮೊದಲು ಬಹಳಷ್ಟು ತಪ್ಪಾಗುತ್ತದೆ. ಕೇವಲ ನಂಬಿಕೆ ಇರಲಿ’ ಎನ್ನುವ ಸಾಲುಗಳನ್ನು ಸುಮಲತಾ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಸುಮಲತಾ, ದರ್ಶನ್‌ಗಾಗಿ ಈ ಸಾಲುಗಳನ್ನು ಹಾಕಿದ್ದಾರೆ ಎಂದು ಅನೇಕರು ಹೇಳುತ್ತಿದ್ದಾರೆ. ಸದ್ಯ ಈ ಪೋಸ್ಟ್‌ ಸೋಶಿಯಲ್‌ ಮೀಡಿಯಾಗಳಲ್ಲಿ ವೈರಲ್‌ ಆಗುತ್ತಿದೆ.

ಹೆಚ್ಚಿನ ಸುದ್ದಿ