Wednesday, May 14, 2025
Homeಟಾಪ್ ನ್ಯೂಸ್TAHAWWUR RANA: ಕುಟುಂಬದವರೊಂದಿಗೆ ಮಾತನಾಡಲು ಅವಕಾಶ ಕೇಳಿ ರಾಣಾ ಸಲ್ಲಿಸಿದ್ದ ಅರ್ಜಿ ವಜಾ

TAHAWWUR RANA: ಕುಟುಂಬದವರೊಂದಿಗೆ ಮಾತನಾಡಲು ಅವಕಾಶ ಕೇಳಿ ರಾಣಾ ಸಲ್ಲಿಸಿದ್ದ ಅರ್ಜಿ ವಜಾ

ನವದೆಹಲಿ: ಮುಂಬೈ ದಾಳಿಯ ಮಾಸ್ಟರ್‌ಮೈಂಡ್‌ ತಹವ್ವೂರ್ ಹುಸೇನ್ ರಾಣಾ ತನ್ನ ಕುಟುಂಬದವರೊಂದಿಗೆ ಮಾತನಾಡಲು ಅವಕಾಶ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ.

ರಾಣಾ ವಕೀಲರ ಮೂಲಕ ಅರ್ಜಿ ಸಲ್ಲಿಸಿ, ತಮ್ಮ ಕುಟುಂಬ ಸದಸ್ಯರೊಂದಿಗೆ ಮಾತನಾಡುವುದು ಮೂಲಭೂತ ಹಕ್ಕು ಮತ್ತು ಅವರು ತಮ್ಮ ಯೋಗಕ್ಷೇಮದ ಬಗ್ಗೆ ಚಿಂತಿತರಾಗಿರಬೇಕು ಎಂದು ಹೇಳಿದ್ದ. ಈ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಚಂದರ್ ಜಿತ್ ಸಿಂಗ್ ಅವರು, ಕುಟುಂಬ ಸದಸ್ಯರೊಂದಿಗೆ ಮಾತನಾಡಲು ಅನುಮತಿ ನೀಡಲಾಗಲ್ಲ ಎಂದು ತೀರ್ಪು ನೀಡಿದ್ದಾರೆ.

ಎನ್ ಐಎ ಯು ರಾಣಾ ಸಲ್ಲಿಸಿದ್ದ ಅರ್ಜಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಪ್ರಕರಣದ ತನಿಖೆ ನಿರ್ಣಾಯಕ ಹಂತದಲ್ಲಿದ್ದು, ಕುಟುಂಬ ಸದಸ್ಯರೊಂದಿಗೆ ಮಾತನಾಡಲು ಅವಕಾಶ ನೀಡಿದರೆ ರಾಣಾ ನಿರ್ಣಾಯಕ ಮಾಹಿತಿಯನ್ನು ಹಂಚಿಕೊಳ್ಳಬಹುದು ಎಂದು ವಾದಿಸಿತು.

ಹೆಚ್ಚಿನ ಸುದ್ದಿ

error: Content is protected !!