ಬೆಳ್ತಂಗಡಿ : ಧರ್ಮಸ್ಥಳ (Dharmasthala) ದಲ್ಲಿ ಅಸಹಜ ಸಾವು ಪ್ರಕರಣದ ಬಗ್ಗೆ ತನಿಖೆಗೆ ರಾಜ್ಯ ಸರ್ಕಾರ (Congress) ಎಸ್ಐಟಿ (SIT) ತಂಡ ರಚನೆ ಮಾಡಿದ ಬೆನ್ನಲ್ಲೆ ಶ್ರೀ ಮಂಜುನಾಥನ ದರ್ಶನಕ್ಕೆ ಬಂದಿದ್ದ ಶಿಕ್ಷಕನೋರ್ವನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮೃತ ಶಿಕ್ಷಕನನ್ನು ಕುಷ್ಟಗಿ ತಾಲೂಕಿನ ಜಮಲಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಬಸವರಾಜ ಪೊಲೀಸ್ ಪಾಟೀಲ್ (35) ಎಂದು ಗುರುತಿಸಲಾಗಿದೆ. ಮೂಲತಃ ಮುದೇನೂರು ಇದ್ಲಾಪುರ ಗ್ರಾಮದ ಬಸವರಾಜ ಕಳೆದ ಒಂದುವರೆ ವರ್ಷದಿಂದ ಜಮಲಾಪುರ ಶಾಲೆಯಲ್ಲಿ ಮುಖ್ಯ ಶಿಕ್ಷಕನಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಆದರೆ ಕಳೆದ ಕೆಲ ದಿನಗಳ ಹಿಂದೆ ಧರ್ಮಸ್ಥಳಕ್ಕೆ ಆಗಮಿಸಿದ್ದರು. ಆದರೆ ಜುಲೈ 20 ರಂದು ಧರ್ಮಸ್ಥಳದ ನೇತ್ರಾವತಿ ಸೇತುವೆಯ ಕೆಳಭಾಗ ಹಳೆಯ ರಸ್ತೆಯಲ್ಲಿ ಕೊಳೆತ ಸ್ಥಿತಿ ಪತ್ತೆಯಾಗಿದೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮೇಲ್ನೋಟಕ್ಕೆ ಇದೊಂದು ಸಹಜ ಸಾವು ಎಂದು ಕಂಡು ಬಂದಿದ್ದು, ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಬಳಿಕ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರ ಮಾಡಲಾಗಿದೆ.
ಇದನ್ನು ಓದಿ : ವಿಷಾಹಾರದಿಂದ ತಂದೆ, ಮಗಳು ಸಾವು – ಇನ್ನಿಬ್ಬರ ಸ್ಥಿತಿ ಗಂಭೀರ