Sunday, June 7, 2026
Homeಕ್ರೈಂDHARMASTHALA : ಮಂಜುನಾಥನ ದರ್ಶನಕ್ಕೆ ಬಂದಿದ್ದ ಶಿಕ್ಷಕನ ಶ*ವ ನೇತ್ರಾವತಿ ಸೇತುವೆ ಬಳಿ ಪತ್ತೆ.! 

DHARMASTHALA : ಮಂಜುನಾಥನ ದರ್ಶನಕ್ಕೆ ಬಂದಿದ್ದ ಶಿಕ್ಷಕನ ಶ*ವ ನೇತ್ರಾವತಿ ಸೇತುವೆ ಬಳಿ ಪತ್ತೆ.! 

ಬೆಳ್ತಂಗಡಿ : ಧರ್ಮಸ್ಥಳ (Dharmasthala) ದಲ್ಲಿ ಅಸಹಜ ಸಾವು ಪ್ರಕರಣದ ಬಗ್ಗೆ ತನಿಖೆಗೆ ರಾಜ್ಯ ಸರ್ಕಾರ (Congress) ಎಸ್ಐಟಿ (SIT) ತಂಡ ರಚನೆ ಮಾಡಿದ ಬೆನ್ನಲ್ಲೆ ಶ್ರೀ ಮಂಜುನಾಥನ ದರ್ಶನಕ್ಕೆ ಬಂದಿದ್ದ ಶಿಕ್ಷಕನೋರ್ವನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮೃತ ಶಿಕ್ಷಕನನ್ನು ಕುಷ್ಟಗಿ ತಾಲೂಕಿನ ಜಮಲಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಬಸವರಾಜ ಪೊಲೀಸ್ ಪಾಟೀಲ್ (35) ಎಂದು ಗುರುತಿಸಲಾಗಿದೆ. ಮೂಲತಃ ಮುದೇನೂರು ಇದ್ಲಾಪುರ ಗ್ರಾಮದ ಬಸವರಾಜ ಕಳೆದ ಒಂದುವರೆ ವರ್ಷದಿಂದ ಜಮಲಾಪುರ ಶಾಲೆಯಲ್ಲಿ ಮುಖ್ಯ ಶಿಕ್ಷಕನಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಆದರೆ ಕಳೆದ ಕೆಲ ದಿನಗಳ ಹಿಂದೆ ಧರ್ಮಸ್ಥಳಕ್ಕೆ ಆಗಮಿಸಿದ್ದರು. ಆದರೆ ಜುಲೈ 20 ರಂದು ಧರ್ಮಸ್ಥಳದ ನೇತ್ರಾವತಿ ಸೇತುವೆಯ ಕೆಳಭಾಗ ಹಳೆಯ ರಸ್ತೆಯಲ್ಲಿ ಕೊಳೆತ ಸ್ಥಿತಿ ಪತ್ತೆಯಾಗಿದೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮೇಲ್ನೋಟಕ್ಕೆ ಇದೊಂದು ಸಹಜ ಸಾವು ಎಂದು ಕಂಡು ಬಂದಿದ್ದು, ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಬಳಿಕ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರ ಮಾಡಲಾಗಿದೆ.

ಇದನ್ನು ಓದಿ : ವಿಷಾಹಾರದಿಂದ ತಂದೆ, ಮಗಳು ಸಾವು – ಇನ್ನಿಬ್ಬರ ಸ್ಥಿತಿ ಗಂಭೀರ

ತೆಲಂಗಾಣದಲ್ಲಿ ಚಾಲಕನೋರ್ವ ಅಜಾಗರೂಕತೆಯಿಂದ ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಕೃಷ್ಣ ನದಿಗೆ (Krishna River)  ಹಾರಿ ಬಿದ್ದು ನಾಪತ್ತೆಯಾಗಿರುವ ಘಟನೆ ಜುರಾಲಾ ಪ್ರಾಜೆಕ್ಟ್ ಬ್ಯಾರೇಜ್ ಮೇಲೆ ನಡೆದಿದೆ.
ನಾಪತ್ತೆಯಾದ ಯುವಕನನ್ನು ಬೂಡಿದಪಾಡು ಗ್ರಾಮದ ಮಹೇಶ್ (21) ಎಂದು ಗುರುತಿಸಲಾಗಿದೆ. ಮಹೇಶ್ ಹಾಗೂ ಜಾನಕಿರಾಮ್ ಇಬ್ಬರು ಬೈಕ್ ನಲ್ಲಿ ಸಾಗುತ್ತಿರುವಾಗ ಹಿಂಬದಿಯಿಂದ ವೇಗವಾಗಿ ಬಂದ ಕಾರೊಂದು ಬೈಕ್ ಗೆ ಗುದ್ದಿಕೊಂಡು ಸಾಗಿದೆ.
ಪರಿಣಾಮ ಬೈಕ್ ನಲ್ಲಿದ್ದ ಮಹೇಶ್ ಹಾರಿ ಕೃಷ್ಣ ನದಿಗೆ ಹಾರಿ ಬಿದ್ದಿದ್ದು, ಮತ್ತೋರ್ವ ಸವಾರ ಜಾನಕಿರಾಮ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುವನ್ನು ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಈ ಘಟನೆಗೆ ಕಾರು ಚಾಲಕನ ಅತಿ ವೇಗ ಹಾಗೂ ಮೊಬೈಲ್ ನೋಡಿಕೊಂಡು ಚಾಲನೆ ಮಾಡಿದ್ದೆ ಅಪಘಾತಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಇದೊಂದು ಹಿಟ್ ಅಂಡ್ ರನ್ ಎಂದು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ನಾಪತ್ತೆಯಾದವನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.
ಸದ್ಯ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ತೆಲಂಗಾಣದ ಧರೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿಗಾಗಿ ಪೊಲೀಸರ ಬಲೆ ಬೀಸಿದ್ದಾರೆ.

ಹೆಚ್ಚಿನ ಸುದ್ದಿ

Change Language »
error: Content is protected !!