Monday, April 21, 2025
Homeಟಾಪ್ ನ್ಯೂಸ್DK SHIVAKUMAR : ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ - ಅಕ್ರಮ ಬ್ಯಾನರ್ ತೆರವಿಗೆ ಡಿಕೆಶಿ ಸೂಚನೆ!

DK SHIVAKUMAR : ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ – ಅಕ್ರಮ ಬ್ಯಾನರ್ ತೆರವಿಗೆ ಡಿಕೆಶಿ ಸೂಚನೆ!

ಬೆಂಗಳೂರು : ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಇವತ್ತು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅರಮನೆ ಮೈದಾನ ಸುತ್ತಮುತ್ತ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಹಾಕಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬಿಬಿಎಂಪಿ ಕಮಿಷನರ್ ಗೆ ಸೂಚನೆ ನೀಡಿದ್ದಾರೆ.

ಮಾರ್ಚ್ 17 ರಂದು ಸೋಮವಾರವಾದ ಇವತ್ತು ಅರಮನೆ ಮೈದಾನದಲ್ಲಿ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಹಾಕಿರುವ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಗಳನ್ನು ಕೂಡಲೇ ತೆರವುಗೊಳಿಸಬೇಕು ಎಂದು ಇದನ್ನು ಹಾಕಿರುವವರಿಗೆ ಡಿಸಿಎಂ ಸೂಚಿಸಿದ್ದಾರೆ.

ಒಂದೊಮ್ಮೆ ತೆರವು ಮಾಡದಿದ್ದರೆ ಸಂಬಂಧ ಪಟ್ಟವರ ವಿರುದ್ಧ ದಂಡ ಸೇರಿದಂತೆ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಬಿಬಿಎಂಪಿ ಆಯುಕ್ತರಾದ ತುಷಾರ್ ಗಿರಿನಾಥ್ ಅವರಿಗೆ ಡಿಸಿಎಂ ಸೂಚನೆ ನೀಡಿದ್ದಾರೆ.

ಬೆಂಗಳೂರು ನಗರದ ಸೌಂದರ್ಯವನ್ನು ಹಾಳು ಮಾಡಬಾರದು ಎಂದು ಅನಧಿಕೃತ ಫ್ಲೆಕ್ಸ್, ಬ್ಯಾನರ್ ಗಳನ್ನು ನಿಷೇಧಿಸಲಾಗಿದೆ. ಸರ್ಕಾರದ ಈ ಆದೇಶವನ್ನು ಪದೇ ಪದೆ ನಿರ್ಲಕ್ಷಿಸಲಾಗಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆದೇಶ ಉಲ್ಲಂಘಿಸಿರುವವರು ನಮ್ಮ ಪಕ್ಷದವರಾದರೂ ಸರಿ, ಬೇರೆ ಪಕ್ಷದವರಾದರೂ ಸರಿ ಅಂತಹವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಶಿವಕುಮಾರ್ ಪ್ರಕಟಣೆ ಹೊರಡಿಸಿದ್ದಾರೆ.

ಹೆಚ್ಚಿನ ಸುದ್ದಿ

error: Content is protected !!