ಬೆಂಗಳೂರು : ಪಕ್ಷದಲ್ಲಿನ ಆಂತರಿಕ ಕಿತ್ತಾಟವನ್ನು ಸರಿಪಡಿಸುವಂತೆ ಮನವಿ ಮಾಡಿ ಹೈಕಮಾಂಡ್ಗೆ ಪತ್ರ ಬರೆದಿರುವುದಾಗಿ ಮಾಜಿ ಸಿಎಂ ಡಿ.ವಿ.ಸದಾನಂದಗೌಡ ತಿಳಿಸಿದರು.
ಪಕ್ಷ ಇಷ್ಟು ಹಾಳಾಗಲು ಪಕ್ಷ ವಿರೋಧಿ ಚಟುವಟಿಕೆ ಮಾಡಿದವರ ಮೇಲೆ ಕ್ರಮ ತೆಗೆದುಕೊಳ್ಳದಿರುವುದೇ ಇದಕ್ಕೆ ಕಾರಣ. ಹೀಗಾಗಿ ಕೆಲ ರೆಬೆಲ್ಸ್ ಗಳಿಗೆ ಬಿಸಿ ಮುಟ್ಟಿಸಿದ್ದರೆ ಇಂತಹ ಸ್ಥಿತಿ ಬರುತ್ತಿರಲಿಲ್ಲ ಎಂದು ಹೇಳಿದರು.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಕಳೆದ ಬಾರಿಗಿಂತಲೂ ಕಳಪೆ ಪ್ರದರ್ಶನ ಮಾಡಿದ್ದು, ಅಲ್ಲದೇ ವಿಪಕ್ಷ ನಾಯಕ ಹುದ್ದೆಗೆ ಭಿನ್ನಾಭಿಪ್ರಾಯ, ಇತರೆ ಪಕ್ಷ ವಿರೋಧಿ ಚಟುವಟಿಕೆಗಳಿಂದಲೇ ನಮಗೆ ಹಿನ್ನಡೆಯಾಗಿದೆ.
ವಿಧಾಸಭೆ ಚುನಾವಣೆಯಲ್ಲೂ ಬಿಜೆಪಿಗೆ ಹೊಡೆತಬಿದ್ದಿತ್ತು. ತಾವು ಪಕ್ಷದ ಅಧ್ಯಕ್ಷರಾಗಿದ್ದಾಗ ಜನಾರ್ದನ ರೆಡ್ಡಿ, ಣುಕಾಚಾರ್ಯ, ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನ ಅಮಾನತು ಮಾಡಿದೆ. ಎಷ್ಟೇ ದೊಡ್ಡವರಾಗಿದ್ದರೂ ಪಕ್ಷ ವಿರೋಧಿ ಆದವರನ್ನ ಬಿಡುತ್ತಿರಲಿಲ್ಲ. ಇಂದು ನಮ್ಮ ಪಕ್ಷದಲ್ಲಿ ಆ ಕೆಲಸ ಆಗುತ್ತಿಲ್ಲ. ಹೀಗಾಗಿ ಇವೆಲ್ಲಾ ಸಮಸ್ಯೆಗಳನ್ನು ಬಗೆಹರಿಸಿ ಪಕ್ಷ ಸರಿ ಮಾಡಿ ಎಂದು ಹೈಕಮಾಂಡ್ಗೆ ಪತ್ರ ಬರೆದಿದ್ದಾಗಿ ತಿಳಿಸಿದರು.