Sunday, July 7, 2024
Homeಚುನಾವಣೆ 2023GEETHA SHIVARAJKUMAR। ನಾಮಪತ್ರ ಸಲ್ಲಿಸಿದ ಗೀತಾ; ಮೆರವಣಿಗೆಯಲ್ಲಿ ಬೆಂಬಲಿಗರ ದಂಡು

GEETHA SHIVARAJKUMAR। ನಾಮಪತ್ರ ಸಲ್ಲಿಸಿದ ಗೀತಾ; ಮೆರವಣಿಗೆಯಲ್ಲಿ ಬೆಂಬಲಿಗರ ದಂಡು

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಇಂದು ನಾಮಪತ್ರ ಸಲ್ಲಿಸಿದ್ರು. ಪತಿ ಶಿವರಾಜ್ ಕುಮಾರ್ ಅವರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದ ಗೀತಾ ನಂತರ ಮೆರವಣಿಗೆಯಲ್ಲಿ ಪಾಲ್ಗೊಂಡ್ರು.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ವಿವಿಧೆಡೆಯಿಂದ ಭಾರೀ ಸಂಖ್ಯೆಯಲ್ಲಿ ನೆರೆದಿದ್ದ ಬೆಂಬಲಿಗರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಗ್ರಾಮೀಣ ಭಾಗದ ಮಹಿಳೆಯರು, ಕೂಲಿ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷದ ಧ್ವಜ ಹಿಡಿದು ಪಕ್ಷದ ಚಿಹ್ನೆ ಧರಿಸಿ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದ್ರು.

ಮಧ್ಯಾಹ್ನದ ಉರಿ ಬಿಸಿಲನ್ನು ಲೆಕ್ಕಿಸದೆ ಬೆಂಬಲಿಗರು ಭಾರೀ ಸಂಖ್ಯೆಯಲ್ಲಿ ಶಿವಮೊಗ್ಗಕ್ಕೆ ಬಂದಿದ್ದು, ಗೀತಾ ಶಿವರಾಜ್ ಕುಮಾರ್ ಗೆ ಮತ್ತಷ್ಟು ಬಲ ಬಂದಂತಿದೆ.

ಗೀತಾಗೆ ಪತಿ ಶಿವರಾಜ್ಕುಮಾರ್, ಸಚಿವ ಮಧು ಬಂಗಾರಪ್ಪ, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಮಂಜುನಾಥ್ ಭಂಡಾರಿ ಸಾಥ್ ಸಾಥ್ ಕೊಟ್ಟಿದ್ದು, ನಿರ್ಮಾಪಕರಾದ ಆರ್ ಚಂದ್ರು ಹಾಗೂ ಕೆಪಿ ಶ್ರೀಕಾಂತ್ ಶುಭ ಕೋರಿದ್ದಾರೆ.

ಹೆಚ್ಚಿನ ಸುದ್ದಿ