ಚಾಮರಾಜನಗರ ತಾಲೂಕಿನ ಹೊಮ್ಮ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು ಸರಿಯಾಗಿ ಪಾಠ ಮಾಡದೆ ಮೊಬೈಲ್ ನಲ್ಲಿ ತಲ್ಲೀನರಾಗಿರುತ್ತಾರೆ ಎಂದು ಗ್ರಾಮಸ್ಥರೆಲ್ಲ ಸೇರಿ ಶಾಲೆಗೆ ಬೀಗ ಜಡಿದಿದ್ದಾರೆ.
ಹೊಮ್ಮ ಸರ್ಕಾರಿ ಶಾಲೆಯ ಶಿಕ್ಷಕರಾದ ರವೀಶ್,ನಟರಾಜು ಇಬ್ಬರು ಶಿಕ್ಷಕರು ಮಕ್ಕಳಿಗೆ ಸರಿಯಾದ ಪಾಠ ಮಾಡ್ತಿಲ್ಲ, ಸದಾ ಮೊಬೈಲ್ ನಲ್ಲೇ ಬ್ಯುಸಿಯಾಗಿರುತ್ತಾರೆ ಎಂದು ಯಾವಾಗಲೂ ದೂರು ಬರುತ್ತಿತ್ತು.
ಇಬ್ಬರು ಶಿಕ್ಷಕರು ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸದ ಹಿನ್ನಲೆ ಪ್ರತಿ ವರ್ಷವೂ ವಿದ್ಯಾರ್ಥಿಗಳ ಸಂಖ್ಯೆ ಕುಸಿತ ಕಾಣುತ್ತಿತ್ತು. ಅಲ್ಲದೇ ಶೈಕ್ಷಣಿಕವಾಗಿ ಮಕ್ಕಳು ತುಂಬಾ ಹಿಂದುಳಿದಿತ್ತು.
ಈ ಹಿಂದೆ ಶಿಕ್ಷಕರನ್ನು ವರ್ಗಾಯಿಸುವಂತೆ ಶಿಕ್ಷಣಾಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಿಲ್ಲ. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಇಂದು ಏಕಾಏಕಿ ಶಾಲೆಗೆ ನುಗ್ಗಿ ಶಿಕ್ಷಕರನ್ನು ಹೊರಹಾಕಿ ಶಾಲೆಗೆ ಬೀಗ ಹಾಕಿದ್ದಾರೆ.