Sunday, July 7, 2024
Homeಟಾಪ್ ನ್ಯೂಸ್Rain Update: ಸಾರ್ವಜನಿಕರೇ ಎಚ್ಚರ - ಮುಂದಿನ 3 ಗಂಟೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ...

Rain Update: ಸಾರ್ವಜನಿಕರೇ ಎಚ್ಚರ – ಮುಂದಿನ 3 ಗಂಟೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ!

ಬೆಂಗಳೂರು: ರಾಜ್ಯಾದ್ಯಂದ ಮಳೆ ಚೆನ್ನಾಗಿ ಸುರಿಯುತ್ತಿದ್ದು, ಕೆಲವೆಡೆ ಹಲವು ಅವಘಡಗಳು ಸಂಭವಿಸಿದೆ. ಇದರ ಬೆನ್ನಲ್ಲೇ ಮುಂದಿನ 3 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಕರಾವಳಿ ಮತ್ತು ಮಧ್ಯ ಕರ್ನಾಟಕದಲ್ಲಿ ಭಾಗದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ,ಶಿವಮೊಗ್ಗ ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಐಎಂಡಿ ತಿಳಿಸಿದೆ.

ಸಾಧ್ಯವಾದರೆ ಮನೆಯೊಳಗೆ ಇರಿ, ಪ್ರಯಾಣ ತಪ್ಪಿಸಿ. ಮರಗಳ ಕೆಳಗಡೆ ಆಶ್ರಯ ಪಡೆಯಬೇಡಿ ಎಂದು ಐಎಂಡಿ ಸೂಚನೆ ನೀಡಿದೆ.

ಹೆಚ್ಚಿನ ಸುದ್ದಿ