Sunday, July 7, 2024
Homeಟಾಪ್ ನ್ಯೂಸ್Heart Attack : ಛೇ.. ಹೃದಯಾಘಾತಕ್ಕೆ ಎಸ್​​​​ಎಸ್​​​​ಎಲ್​​​ಸಿ ವಿದ್ಯಾರ್ಥಿನಿ ಸಾವು..!

Heart Attack : ಛೇ.. ಹೃದಯಾಘಾತಕ್ಕೆ ಎಸ್​​​​ಎಸ್​​​​ಎಲ್​​​ಸಿ ವಿದ್ಯಾರ್ಥಿನಿ ಸಾವು..!

ಉಡುಪಿ : ಇತ್ತೀಚೆಗೆ ಚಿಕ್ಕ ಮಕ್ಕಳು, ಯುವ ಜನ ಹಾರ್ಟ್ ಅಟ್ಯಾಕ್​​ಗೆ ಸಾವನ್ನಪ್ಪುತ್ತಿದ್ದು ಆತಂಕಕ್ಕೆ ಕಾರಣವಾಗಿದೆ. ಇನ್ನು ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯೋರ್ವಳು ಹೃದಯಾಘಾತಕ್ಕೆ ಮೃತಪಟ್ಟ ಘಟನೆ ಜಿಲ್ಲೆಯ ಮೂಡುಬೆಳ್ಳೆಯಲ್ಲಿ ಇಂದು ನಡೆದಿದೆ.

ಪಳ್ಳಿ ದಾದಬೆಟ್ಟು ನಿವಾಸಿ ಜಯರಾಮ ಆಚಾರ್ಯ- ಚಂದ್ರಿಕಾ ದಂಪತಿ ಪುತ್ರಿ ಭ್ಯಾಗ್ಯಶ್ರೀ ಎಂಬ ವಿದ್ಯಾರ್ಥಿನಿಯು ಮೂಡುಬೆಳ್ಳೆ ಸಂತ ಲಾರೆನ್ಸ್‌ ಕನ್ನಡ ಮಾಧ್ಯಮ ಪ್ರೌಢ ಶಾಲೆಯ ವ್ಯಾಸಂಗ ಮಾಡುತ್ತಿದ್ದಳು.

ಬೆಳಗ್ಗೆ ಕೆಲಕಾಲ ಎದೆ ನೋವಿನಿಂದ ಬಳಲಿದ್ದ ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.

ಹೆಚ್ಚಿನ ಸುದ್ದಿ