ಬೆಂಗಳೂರು : ಪಹಲ್ಗಾಮ್ ದಾಳಿಗೆ ಭಾರತವು ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಪ್ರತೀಕಾರ ತೀರಿಸಿಕೊಂಡಿರುವ ಬಗ್ಗೆ ಇಡೀ ದೇಶವೇ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದರೆ, ಕಾಂಗ್ರೆಸ್ ನಾಯಕರು ಮಾತ್ರ ಯುದ್ದ ಬೇಡ, ಶಾಂತಿ ಎಂದು ಹೇಳುತ್ತಿದ್ದಾರೆ. ಇದೀಗ ಅಂತವರ ಪಟ್ಟಿಗೆ ಸಚಿವ ದಿನೇಶ್ ಗುಂಡೂರಾವ್ ಕೂಡ ಸೇರಿದ್ದಾರೆ.
ರಾಜ್ಯದಲ್ಲಿ ಒಂದೆಡೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಯೋಧರಿಗೆ ಬೆಂಬಲ ಸೂಚಿಸುವ ಹಿನ್ನಲೆ ರಾಜ್ಯ ಕಾಂಗ್ರೆಸ್ ಸರ್ಕಾರ ಇಂದು ನಗರದಾದ್ಯಂತ ತಿರಂಗಾ ಯಾತ್ರೆಯನ್ನು ನಡೆಸಿದರೆ, ಇತ್ತ ಸಚಿವ ದಿನೇಶ್ ಗುಂಡೂರಾವ್ ಯುದ್ದ ಆಗಬೇಕು ಅಂತ ಬಯಸೋದು ಸರಿಯಲ್ಲ ಎಂದು ಹೇಳುತ್ತಿದ್ದಾರೆ.
ಈ ಬಗ್ಗೆ ಮಾತನಾಡಿದ ದಿನೇಶ್ ಗುಂಡೂರಾವ್ ಅವರು, ಯುದ್ಧ ಆಗಬೇಕು ಅಂತ ಬಯಸುವುದು ಸರಿಯಲ್ಲ. ಆದರೆ ಪಾಕಿಸ್ತಾನ ಮಾತ್ರ ಪದೇ ಪದೇ ಭಾರತವನ್ನು ಕೆಣಕುತ್ತಿರುವುದು ಕಂಡುಬರುತ್ತದೆ. ಇವತ್ತು ಪಾಕಿಸ್ತಾನದ ವಿರುದ್ಧ ನಮ್ಮ ಸೇನೆ ಹೋರಾಡುತ್ತಿದೆ ಎಂದು ಹೇಳಿದರು.
ಭಾರತ ಪಾಕಿಸ್ತಾನದ ನಡುವೆ ಕದನ ಆಗುತ್ತಿದೆ. ಇದರಲ್ಲಿ ಭಾರತಕ್ಕೆ ಜಯ ಸಿಗಬೇಕು. ಭಾರತೀಯ ಸೇನೆಗೆ ನಾವೆಲ್ಲರೂ ಬೆಂಬಲ ಕೊಡಬೇಕು. ಆದರೆ ಯುದ್ಧ ಆಗಬಾರದು, ಯುದ್ಧ ಬೇಕು ಅಂತ ಕೂಡ ಯಾರು ಬಯಸುವುದು ಸರಿಯಲ್ಲ ಎಂದು ಸಚಿನ್ ದಿನೇಶ್ ಗುಂಡೂರಾವ್ ತಿಳಿಸಿದರು.