ನವದೆಹಲಿ : ಪಹಲ್ಗಾಮ್ ದಾಳಿಯ ಹಿನ್ನೆಲೆಯಲ್ಲಿ ಭಾರತವು ಪಾಕಿಸ್ತಾನದ ವಿರುದ್ದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಹಮ್ಮಿಕೊಂಡಿದೆ. ಇದರಿಂದಾಗಿ ಭಾರತ-ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ಐಪಿಎಸ್ ಕ್ರೀಡಾಕೂಟವನ್ನು ರದ್ದುಮಾಡಲು ಬಿಸಿಸಿಐ ನಿರ್ಧರಿಸಿದೆ. ನಿನ್ನೆ ಪಂಜಾಬ್ ನಲ್ಲಿ ಇದ್ದಕ್ಕಿಂದಂತೆಯೇ ಪಂಜಾಬ್ ಮತ್ತು ಹೈದರಾಬಾದ್ ನಡುವಿನ ಪಂದ್ಯಾವಳಿಯನ್ನು ಅರ್ಧಕ್ಕೆ ಸ್ಥಗಿತಗೊಳಿಸಲಾಗಿತ್ತು. ಮುಂದಿನ ಎಲ್ಲಾ ಪಂದ್ಯಾವಳಿಗಳನ್ನೂ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.
ಪಾಕಿಸ್ತಾನದಿಂದ ಯಾವುದೇ ದಾಳಿಯ ಸಾಧ್ಯತೆ ಇಲ್ಲದಿದ್ದರೂ ಸಹ ಭಾರತದಲ್ಲಿರುವ ಉಗ್ರರ ಬೆಂಬಲಿಗರು, ಭಯೋತ್ಪಾದಕರ ಬಗ್ಗೆ ಅನುಕಂಪಹೊಂದಿರುವವರು ಹಾಗೂ ಪಾಕಿಸ್ತಾನದ ಪರವಾಗಿ ನಿಲ್ಲುವವರು ಭಯೋತ್ಪಾದಕ ದಾಳಿಯನ್ನು ನಡೆಸಬಹುದೆಂದು ಈ ಕ್ರಮ ವಹಿಸಲಾಗಿದೆ.
ಈಗಾಗಲೇ ಸೂಕ್ಷ್ಮ ಪ್ರದೇಶಗಳಾದ ಜಲಾನಯನ ಪ್ರದೇಶಗಳು, ಅಣೆಕಟ್ಟುಗಳು, ಅಣುಸ್ಥಾವರಗಳು ಮುಂತಾದ ಪ್ರದೇಶಗಳ ಮೇಲೆ ಭಾರತ ಬಿಗಿ ಭದ್ರತೆ ನಿಯೋಜಿಸಿದೆ. ಭಾರತದಲ್ಲಿ ಭಯೋತ್ಪಾದಕ ಕೃತ್ಯಗಳನ್ನು ನಡೆಸುವುದಾಗಿ ದೇಶದೊಳಗೇ ಇರುವ ಉಗ್ರರು ಈಗಾಗಲೇ ಎಚ್ಚರಿಕೆ ನೀಡಿದ್ದಾರೆ. ಹೀಗಾಗಿ ಮುಂಜಾಗರೂಕತಾ ಕ್ರಮವಾಗಿ ಬಿಸಿಸಿಐ ಐಪಿಎಲ್ ಕ್ರೀಡಾಕೂಟದ ಸ್ಥಗಿತಗೊಳಿಸಲು ಚಿಂತನೆ ನಡೆಸಿದೆಯೆನ್ನಲಾಗಿದೆ.
ಇದುವರೆಗೂ ಎಲ್ಲಾ ಸಾಧ್ಯತೆಗಳನ್ನು ಕಾಯ್ದಿರಿಸಿಕೊಳ್ಳಲಾಗಿದೆ. ಈ ಬಗ್ಗೆ ಶೀಘ್ರದಲ್ಲಿಯೇ ಸ್ಪಷ್ಟ ನಿರ್ಧಾರ ಕೈಗೊಳ್ಳುವುದಾಗಿ ಬಿಸಿಸಿಐ ತಿಳಿಸಿದೆ.