Thursday, May 22, 2025
Homeಟಾಪ್ ನ್ಯೂಸ್DK Shivakumar : ಬಿಜೆಪಿ ಕ್ಷೇತ್ರಗಳಿಗೆ ಅನುದಾನ ತಾರತಮ್ಯ - ಡಿಕೆಶಿ ವಿರುದ್ಧ ದಾಖಲಾಯ್ತು ದೂರು.!

DK Shivakumar : ಬಿಜೆಪಿ ಕ್ಷೇತ್ರಗಳಿಗೆ ಅನುದಾನ ತಾರತಮ್ಯ – ಡಿಕೆಶಿ ವಿರುದ್ಧ ದಾಖಲಾಯ್ತು ದೂರು.!

ಬೆಂಗಳೂರಿನ ಜಯನಗರ ಕ್ಷೇತ್ರಕ್ಕೆ ಅನುದಾನ ಹಂಚಿಕೆ ಮಾಡದ ವಿಚಾರ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಇದೀಗ ಇದೇ ವಿಚಾರವನ್ನು ಇಟ್ಟುಕೊಂಡು  ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗಿದೆ.

ಈ ಹಿಂದೆ ಡಿಕೆಶಿ ನಾನೇ ಬೆಂಗಳೂರಿನ ಜಯನಗರ ಕ್ಷೇತ್ರದ ಬಿಟ್ಟು ಉಳಿದೆಲ್ಲ ವಿಧಾನಸಭಾ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡಲು ಆದೇಶಿಸಿದ್ದೇನೆ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದರು, ಡಿಕೆಶಿಯ ಈ ಹೇಳಿಕೆಯನ್ನು ಕೇಳಿ  ಬಿಜೆಪಿ ನಾಯಕರು ಕೆಂಡಾಮಂಡಲವಾಗಿದ್ದರು.

ಈ ಬಗ್ಗೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಡಿಸಿಎಂ ಡಿಕೆಶಿ ಅವರಿಗೆ ಪತ್ರವನ್ನು ಕೂಡ ಬರೆದಿದ್ದರು, ಇದೀಗ ಈ ವಿಚಾರವನ್ನು ಇಟ್ಟುಕೊಂಡು ವಕೀಲ ಹೆಚ್​.ಯೋಗೇಂದ್ರ ಎಂಬುವವರು ಡಿಕೆ ಶಿವಕುಮಾರ್ ವಿರುದ್ಧ ಬುಧವಾರ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್​ ಅವರಿಗೆ ದೂರು ನೀಡಿದ್ದಾರೆ. 

ಈ ದೂರಿನಲ್ಲಿ, ಬೆಂಗಳೂರು ಅಭಿವೃದ್ಧಿ ಖಾತೆ ಸಚಿವರ ವಿವೇಚನಾ ಕೋಟಾದಡಿ ಅನುದಾನ ಹಂಚಿಕೆ ಮಾಡದೇ, ಉಪಮುಖ್ಯಮಂತ್ರಿ ಆಗುವ ವೇಳೆ ಸ್ವೀಕರಿಸಿದ್ದ ಪ್ರಮಾಣ ವಚನವನ್ನು ಉಲ್ಲಂಘಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖವಾಗಿದೆ.

ಹೆಚ್ಚಿನ ಸುದ್ದಿ

error: Content is protected !!