ಕೊಪ್ಪಳ : ಡಿಕೆಶಿಗೆ ಸಿಎಂ ಸ್ಥಾನವನ್ನು ನೀಡಬೇಕು ಎಂದು ಒಕ್ಕಲಿಗ ಸ್ವಾಮೀಜಿ ಹೇಳಿಕೆಗೆ ಪ್ರತಿಕ್ರಿಯಿಸಿದ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ರಾಜಕೀಯಕ್ಕೂ ಧರ್ಮಕ್ಕೂ ಅಂತರವಿದ್ದರೆ ಒಳ್ಳೆಯದು ಎಂದು ಆಕ್ರೋಶ ಹೊರಹಾಕಿದ್ದಾರೆ.
ಕೊಪ್ಪಳದಲ್ಲಿ ಮಾತನಾಡಿದ ಅವರು. ಸಿಎಂ ಬಡಾವಣೆಯ ಬಗ್ಗೆ ಬೇರೆ ಮಾತೇ ಇಲ್ಲ. ಈಗಾಗಲೇ ಹೈಕಮಾಂಡ್ ಸಿಎಂ ಬಡಾವಣೆ ವಿಚಾರವಾಗಿ ಸ್ಪಷ್ಟನೆ ನೀಡಿದ್ದಾರೆ ಮತ್ತೆ ಅದೇ ವಿಷಯದ ಬಗ್ಗೆ ಮಾತನಾಡುವುದು ಬೇಡ ಎಂದರು.
ರಾಜ್ಯದಲ್ಲಿ ಈ ವಿಚಾರದ ಬಗ್ಗೆ ಮಾತನಾಡಲು ಕೇವಲ ಒಬ್ಬಿಬ್ಬರು ಸ್ವಾಮಿಗಳು ಅಲ್ಲ. ಈಗ ಅಂತಹ ಸ್ವಾಮೀಜಿಗಳು ಹೆಚ್ಚಾಗಿದ್ದಾರೆ. ಈ ವಿಚಾರವಾಗಿ ರಾಜಕೀಯ ಹಾಗೂ ಧರ್ಮಕ್ಕೆ ಅಂತರ ಇದ್ದರೆ ಎಲ್ಲರಿಗೂ ಒಳ್ಳೆಯದು ಎಂದು ರಾಘವೇಂದ್ರ ಹಿಟ್ನಾಳ್ ಹೇಳಿದರು.
ರಾಜ್ಯದಲ್ಲಿ ಒಳ್ಳೆಯ ಆಡಳಿತವನ್ನು ಹಾಗೂ ಐದು ಗ್ಯಾರಂಟಿ ಯೋಜನೆಗಳನ್ನು ಪ್ರತಿಯೊಬ್ಬರ ಬಡವರ ಮನೆಗೆ ತಲುಪಿಸಿದ್ದಾರೆ. ಇಂತಹ ಕೆಲಸವನ್ನು ಮಾಡಿರುವ ಸಿಎಂ ಯಾರಾದರೂ ಇದ್ದರೆ ಅದು ಸಿದ್ದರಾಮಯ್ಯ ಅವರು ಮಾತ್ರ, ಹೀಗಿರುವಾಗ ಸಿಎಂ ಬಡಾವಣೆ ಹೇಗೆ ಸಾದ್ಯ ಎಂದು ಹಿಟ್ನಾಳ್ ಪ್ರಶ್ನಿಸಿದರು.