ಮಾಜಿ ಸಂಸದ ಆರ್ ಧೃವನಾರಾಯಣ್ ವಿಧಿವಶರಾಗಿದ್ದಾರೆ. ಇಂದು ಬೆಳಿಗ್ಗೆ ಮೈಸೂರಿನಲ್ಲಿ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಹೃದಯಾಘಾತ ಸಭವಿಸಿ ಮೃತಪಟ್ಟಿದ್ದಾರೆ.
ಇಂದು ಮುಂಜಾನೆ ತೀವ್ರವಾದ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೈಸೂರಿನ ಒಂಟಿಕೊಪ್ಪಲಿನ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯದಲ್ಲೆ ಧೃವನಾರಾನಣ್ ಅಸುನೀಗಿದ್ದಾರೆ.
ಚಾಮರಾಜನಗರ ಕ್ಷೇತ್ರದಿಂದ ೨ ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಅವರು ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ವಿ.ಶ್ರೀನಿವಾಸ್ ಪ್ರಸಾದ್ ಎದರು ಸೋಲನುಭವಿಸಿದ್ರು. ನಂತರ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ರು. ಈಬಾರಿಯ ವಿಧಾನಸಭೆ ಚುನಾವಣೆಯಲ್ಲಿ ನಂಜನಗೂಡು ಕ್ಷೇತ್ರದಿಂದ ಸ್ಪರ್ಧಿಸಲು ಅವರು ತಯಾರಿ ನಡೆಸುತ್ತಿದ್ರು