Sunday, July 7, 2024
Homeಕ್ರೈಂLandslide: ಭೂಕುಸಿತ ಪ್ರಕರಣ; ಮಣ್ಣಿನಡಿ ಸಿಲುಕಿದ್ದ ಇಬ್ಬರ ಪೈಕಿ ಒಬ್ಬ ಕಾರ್ಮಿಕ ಸಾವು

Landslide: ಭೂಕುಸಿತ ಪ್ರಕರಣ; ಮಣ್ಣಿನಡಿ ಸಿಲುಕಿದ್ದ ಇಬ್ಬರ ಪೈಕಿ ಒಬ್ಬ ಕಾರ್ಮಿಕ ಸಾವು

ಮಂಗಳೂರು: ಮಂಗಳೂರಿನ ಬಲ್ಮಠ ಬಳಿ ಬುಧವಾರ ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ ಉಂಟಾಗಿ ಮಣ್ಣಿನಡಿ ಸಿಲುಕಿದ್ದ ಇಬ್ಬರು ಕಾರ್ಮಿಕರ ಪೈಕಿ ಓರ್ವ ಸಾವನ್ನಪ್ಪಿದ್ದಾನೆ.

ಮೃತ ಕಾರ್ಮಿಕ ಬಿಹಾರ ಮೂಲದ ಚಂದನ್‌ ಕುಮಾರ್‌ (30) ಎಂದು ತಿಳಿದು ಬಂದಿದೆ. ಇಂದು ಮಧ್ಯಾಹ್ನ ಕಟ್ಟಡ ಕಾಮಗಾರಿಯ ವೇಳೆ ಭೂಕುಸಿತ ಸಂಭವಿಸಿ ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದರು. ವಿಚಾರ ತಿಳಿಯುತ್ತಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ, ಎಸ್‌ಡಿಆರ್‌ಎಫ್‌, ಎನ್‌ಡಿಆರ್‌ಎಫ್‌ ತಂಡ ರಕ್ಷಣಾ ಕಾರ್ಯಾಚರಣೆ ನಡೆಸಿದೆ.

ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದ ಕೆಲ ಗಂಟೆಗಳಲ್ಲಿ ಓರ್ವ ಕಾರ್ಮಿಕನನ್ನು ಸುರಕ್ಷಿತವಾಗಿ ಹೊರತೆಗೆದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದೀಗ ಸತತ 7 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಮತ್ತೊಬ್ಬ ಕಾರ್ಮಿಕನ ಮೃತದೇಹವನ್ನು ಹೊರತೆಗೆಯಲಾಗಿದೆ.

ಹೆಚ್ಚಿನ ಸುದ್ದಿ