Sunday, July 7, 2024
Homeಚುನಾವಣೆ 2023RSS VS CONGRESS | ಆರ್‌ಎಸ್‌ಎಸ್‌ ಯುಗಾದಿ ಉತ್ಸವಕ್ಕೆ ಕಾಂಗ್ರೆಸ್ ಕಿರಿಕ್!

RSS VS CONGRESS | ಆರ್‌ಎಸ್‌ಎಸ್‌ ಯುಗಾದಿ ಉತ್ಸವಕ್ಕೆ ಕಾಂಗ್ರೆಸ್ ಕಿರಿಕ್!

ಬೆಂಗಳೂರು: ಬೆಂಗಳೂರಿನ ವೈಯಾಲಿಕಾವಲ್‌ನಲ್ಲಿ ಆರ್ ಎಸ್ ಎಸ್ ವತಿಯಿಂದ ಆಯೋಜನೆ ಮಾಡಲಾಗಿದ್ದ ಯುಗಾದಿ ಉತ್ಸವಕ್ಕೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ.

ಕಳೆದ ಎರಡು ದಿನಗಳ ಹಿಂದೆ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮವನ್ನು ಆಯೋಜನೆ ಮಾಡಲು ಅನುಮತಿ ಕೇಳಿದಾಗ ಬಿಬಿಎಂಪಿ ಅನುಮತಿ ನಿರಾಕರಿಸುತ್ತು. ಆದರೆ ಇಂದು ಆರ್‌ಎಸ್‌ಎಸ್‌ ಕಾರ್ಯಕ್ರಮಕ್ಕೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿದ ಕಾಂಗ್ರೆಸ್ ಕಾರ್ಯಕರ್ತರು ಕಾರ್ಯಕ್ರಮ ನಡೆಸದಂತೆ ತಾಕೀತು ಮಾಡಿದ್ದಾರೆ

ಈ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕಾಗಿ ಹಾಕಲಾಗಿದ್ದ ಪೆಂಡಾಲ್‌ ಹಾಗೂ ಮೈಕ್‌ ಅನ್ನು ಬಿಬಿಎಂಪಿ ಹಾಗೂ ಚುನಾವಣಾ ಅಧಿಕಾರಿಗಳು ತೆಗೆಸಿದ್ದಾರೆ.

ಆದರೆ, ಈ ಕಾರ್ಯಕ್ರಮವನ್ನು ನಡೆಸಲು ತಾವು ಅನುಮತಿಯನ್ನು ಪಡೆದುಕೊಂಡಿದ್ದಾಗಿ ಯುಗಾದಿ ಉತ್ಸವ ಸಂಘಟಕರು ಹೇಳಿದ್ದಾರೆ. ಈ ವೇಳೆ ಕಾಂಗ್ರೆಸ್ ಹಾಗೂ ಆರ್‌ಎಸ್‌ಎಸ್‌ ಕಾರ್ಯಕರ್ತರ ನಡುವೆ ಭಾರೀ ವಾಗ್ವಾದ ನಡೆದಿದೆ. ಕಾಂಗ್ರೆಸ್ ಆಕ್ಷೇಪದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಪೊಲೀಸರು ಮತ್ತು ಚುನಾವಣಾ ಆಯೋಗದ ಅಧಿಕಾರಿಗಳು ಭೇಟಿ ನೀಡಿ ಪೆಂಡಾಲ್‌ ತೆಗೆಸಿದ್ದಾರೆ.

ಆರ್‌ಎಸ್‌ಎಸ್ ಸಂಸ್ಥಾಪಕ ಹೆಡಗೇವಾರ್ ಜನ್ಮದಿನದ ನಿಮಿತ್ತ ಯುಗಾದಿ ಉತ್ಸವ ಆಯೋಜಿಸಲಾಗಿತ್ತು.

ಹೆಚ್ಚಿನ ಸುದ್ದಿ