ಬೆಂಗಳೂರು: ನೈಸ್ ರಸ್ತೆ ಸಮೀಪದ ಕೆರೆಗೆ ಹಾರಿ ಯುವ ಪ್ರೇಮಿಗಳ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.
ತಲಘಟ್ಟಪುರ ಸಮೀಪದ ಅಂಜನಾಪುರದ ಯುವತಿ ಅಂಜನಾ(20) ಮತ್ತು ಕೋಣನಕುಂಟೆ ನಿವಾಸಿ ಯುವಕ ಶ್ರೀಕಾಂತ್(25) ಸಾವನ್ನಪ್ಪಿರುವ ದುರ್ದೈವಿಗಳು. ಜುಲೈ 1 ರಂದು ನಾಪತ್ತೆಯಾಗಿದ್ದ ಪ್ರೇಮಿಗಳು ಶವವಾಗಿ ಪತ್ತೆಯಾಗಿದ್ದಾರೆ.
ಕಳೆದ ಕೆಲ ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿಸ್ತಿದ್ದರು. ಆದರೆ ವಿದ್ಯಾರ್ಥಿನಿ ಪೋಷಕರಿಂದ ಇವರ ಪ್ರೀತಿಗೆ ವಿರೋಧವಿತ್ತು ಎನ್ನಲಾಗಿದೆ.
ನಾಪತ್ತೆ ಹಿನ್ನಲೆ ಪೋಷಕರು ಕೋಣನಕುಂಟೆ ಮತ್ತು ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.