Sunday, July 7, 2024
Homeಕ್ರೈಂViral news : ಗಂಟಲಲ್ಲಿ ಚಿಕನ್ ಪೀಸ್.. ಹಾರಿಹೋಯಿತು ವ್ಯಕ್ತಿಯ ಪ್ರಾಣ.!

Viral news : ಗಂಟಲಲ್ಲಿ ಚಿಕನ್ ಪೀಸ್.. ಹಾರಿಹೋಯಿತು ವ್ಯಕ್ತಿಯ ಪ್ರಾಣ.!

ಹೈದರಬಾದ್‌ನ ಶಾದ್‌ ನಗರದ ಬಾರ್ ವೊಂದರಲ್ಲಿ  ಬಿರಿಯಾನಿ ತಿನ್ನುವಾಗ ಗಂಟಲಲ್ಲಿ ಚಿಕನ್‌ ಪೀಸ್‌ ಸಿಲುಕಿದ ವ್ಯಕ್ತಿಯೊಬ್ಬರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.

ಅಣ್ಣಾರಾಮ್‌ ಗ್ರಾಮದ ನಿವಾಸಿ ಶ್ರೀಕಾಂತ್‌ ಮೃತ ದುರ್ದೈವಿ. ತನ್ನ ಸಹೋದರಿಯನ್ನು ಭೇಟಿ ಮಾಡಲೆಂದು ಹೈದರಬಾದಿಗೆ ತೆರಳಿದ್ದರು. ಆ ಸಂದರ್ಭದಲ್ಲಿ ಅಲ್ಲೇ ಒಂದು ಬಾರ್‌ಗೆ ಹೋಗಿ ಮದ್ಯ ಮತ್ತು ಚಿಕನ್‌ ಬಿರಿಯಾನಿ ಸೇವನೆ ಮಾಡಿದ್ದಾರೆ. 

ಆ ಸಂದರ್ಭದಲ್ಲಿ ಅವರಿಗೆ ಉಸಿರುಗಟ್ಟಿದಂತಾಗಿ ತಕ್ಷಣ ಬಾರ್‌ನಿಂದ ಹೊರಬರುತ್ತಾರೆ. ತೀವ್ರ ಉಸಿರಾಟದ ತೊಂದರೆಯುಂಟಾಗಿ ಅಲ್ಲೇ ಕುಸಿದು ಬಿದ್ದಿದ್ದಾರೆ. ಆ ತಕ್ಷಣ ಸ್ಥಳೀಯರು ಪೊಲೀಸರಿಗೆ ಕರೆ ಮಾಡಿದ್ದಾರೆ. 

ಪೊಲೀಸರು ಶ್ರೀಕಾಂತ್‌ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ದುರಾದೃಷ್ಟವಶಾತ್‌ ಚಿಕಿತ್ಸೆಗೂ ಮುನ್ನವೇ ಅವರು ಸಾವನ್ನಪ್ಪಿದ್ದಾರೆ.  ಮೊದಲಿಗೆ ಅತಿಯಾದ ಮದ್ಯ ಸೇವನೆಯಿಂದ ಸಾವನ್ನಪ್ಪಿದ್ದಾರೆ ಎಂದು ಸಂಶಯಿಸಲಾಗಿತ್ತು. 

ಆದರೆ ಮರಣೋತ್ತರ ಪರೀಕ್ಷೆಯಲ್ಲಿ  ಗಂಟಲಲ್ಲಿ ಮಾಂಸದ ತುಂಡು ಸಿಕ್ಕಿ ಉಸಿರುಗಟ್ಟಿ ಮೃತಪಟ್ಟಿರುವುದಾಗಿ ಪತ್ತೆಯಾಗಿದೆ. 

ಹೆಚ್ಚಿನ ಸುದ್ದಿ