Thursday, July 10, 2025
Homeದೇಶಹನುಮಾನ್ ಜಯಂತಿ: ರಾಜ್ಯಗಳಿಗೆ ಗೃಹ ಸಚಿವಾಲಯದ ಸೂಚನೆ ಏನು?

ಹನುಮಾನ್ ಜಯಂತಿ: ರಾಜ್ಯಗಳಿಗೆ ಗೃಹ ಸಚಿವಾಲಯದ ಸೂಚನೆ ಏನು?

ನವದೆಹಲಿ: ಹನುಮಾನ್ ಜಯಂತಿಯ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಸೂಚನೆಗಳನ್ನು ನೀಡಿದೆ.

ಇತ್ತೀಚೆಗಷ್ಟೇ ರಾಮನವಮಿ ಸಂದರ್ಭ ಬಿಹಾರ, ಪಶ್ಚಿಮ ಬಂಗಾಳ ಸೇರಿ ದೇಶದ ಹಲವೆಡೆ ಭಾರೀ ಹಿಂಸಾಚಾರ ನಡೆದಿತ್ತು. ಈ ಹಿನ್ನೆಲೆಯಲ್ಲಿ ಗೃಹ ಸಚಿವಾಲಯ ಈ ಎಚ್ಚರಿಕೆಯನ್ನು ನೀಡಿದೆ.

ಸರಕಾರಗಳು ಹನುಮ ಜಯಂತಿಯ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕು. ಹಬ್ಬ ಶಾಂತಿಯುತವಾಗಿ ನಡೆಯಬೇಕು. ಸಮಾಜದಲ್ಲಿ ಅಶಾಂತಿಯನ್ನು ಉಂಟು ಮಾಡುವ ವಿಷಯಗಳ ಬಗ್ಗೆ ನಿಗಾ ಇಡಬೇಕು’ ಎಂದು ಗೃಹ ಸಚಿವಾಲಯ ತಿಳಿಸಿದೆ.

ಹೆಚ್ಚಿನ ಸುದ್ದಿ

While viewing the website, tap in the menu bar. Scroll down the list of options, then tap Add to Home Screen.
Use Safari for a better experience.
error: Content is protected !!