Sunday, July 7, 2024
Homeಟಾಪ್ ನ್ಯೂಸ್Dengue Fever : ಡೆಂಘಿನಿಂದ ಸಾವಿನ ಭೀತಿ.. ಸಚಿವ ಗುಂಡೂರಾವ್ ತುರ್ತು ಸಭೆ

Dengue Fever : ಡೆಂಘಿನಿಂದ ಸಾವಿನ ಭೀತಿ.. ಸಚಿವ ಗುಂಡೂರಾವ್ ತುರ್ತು ಸಭೆ

ಬೆಂಗಳೂರು : ರಾಜ್ಯದಲ್ಲಿ ಡೆಂಘಿ ಜ್ವರದಿಂದ ಇಂದು ಮೈಸೂರು ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಸೇರಿ ಇಬ್ಬರು ಮೃತಪಟ್ಟಿದ್ದು, ಡೆಂಘಿಯ ಭೀತಿ ಜನರಲ್ಲಿ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ತುರ್ತು ಸಭೆ ನಡೆಸಿದರು.

 

ರಾಜ್ಯದಲ್ಲಿ ಡೆಂಘಿ ನಿಯಂತ್ರಣ ಕುರಿತಂತೆ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಒಗಳು ಮತ್ತು ಜಿಲ್ಲಾ ಆರೋಗ್ಯಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ಮಾಡಿದರು.

ಜಿಲ್ಲೆಗಳಲ್ಲಿ ಎಲ್ಲಾ ಆರೋಗ್ಯ ಕೇಂದ್ರಗಳು, ಆಸ್ಪತ್ರೆಗಳು ಮತ್ತು ಆರೋಗ್ಯ ಸಿಬ್ಬಂದಿ ಡೆಂಘಿ ಪ್ರಕರಣಗಳನ್ನು ನಿರ್ವಹಿಸಲು ಸಜ್ಜಾಗಿರಬೇಕು. ಡೆಂಘಿ ಹರಡುವ ಈಡಿಸ್ ಲಾರ್ವಾಗಳನ್ನು ನಾಶಪಡಿಸುವ ಬಗ್ಗೆ ಗಮನಹರಿಸುವಂತೆ ಮತ್ತು ಜನರಲ್ಲಿ ಡೆಂಗಿ ಕುರಿತು ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹೆಚ್ಚಿನ ಸುದ್ದಿ