Sunday, July 7, 2024
Homeಕ್ರೈಂCRIME : ಆಂಬುಲೆನ್ಸ್‌ ತಡೆಗಟ್ಟಿ ಚಾಲಕನ ಮೇಲೆ ಹಲ್ಲೆಯೆಸಗಿದ್ದ ಪುಂಡರು ಅಂದರ್‌! VIDEO

CRIME : ಆಂಬುಲೆನ್ಸ್‌ ತಡೆಗಟ್ಟಿ ಚಾಲಕನ ಮೇಲೆ ಹಲ್ಲೆಯೆಸಗಿದ್ದ ಪುಂಡರು ಅಂದರ್‌! VIDEO

ನೆಲಮಂಗಲ: ಖಾಸಗಿ ಆಂಬ್ಯುಲೆನ್ಸ್ ಅಡ್ಡಗಟ್ಟಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೆಲಮಂಗಲ ಗ್ರಾಮಾಂತರ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ. ನೆಲಮಂಗಲ ಟೋಲ್ ಬಳಿ ಚಾಲಕನ ಮೇಲೆ ಆರೋಪಿಗಳು ಹಲ್ಲೆ ಮಾಡಿದ್ದರು. ಬೆಂಗಳೂರಿನ ಯಲಚೇನಹಳ್ಳಿ ಮೂಲದ ಯುವರಾಜ್ ಸಿಂಗ್, ಮಂಜುನಾಥ್, ಲತೀಶ್ ಬಂಧಿತ ಆರೋಪಿಗಳು.

ನಿನ್ನೆ ರಾತ್ರಿ ರೋಗಿಯನ್ನು ಖಾಸಗಿ ಆಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸುವ ವೇಳೆ ಕ್ಷುಲ್ಲಕ ವಿಚಾರದಲ್ಲಿ ಅಡ್ಡಗಟ್ಟಿ ಹಲ್ಲೆ ನಡೆಸಿದ್ದರು. ಇವರು ಕಾರಿನಲ್ಲಿ ಬರುವಾಗ ಆಂಬ್ಯುಲೆನ್ಸ್ ಬಂದಿತ್ತು. ಆಂಬ್ಯುಲೆನ್ಸ್ ಅತಿ ವೇಗವಾಗಿ ಓಡಿಸ್ತಿದೀಯಾ ಎಂದು ಕಾರಿನಲ್ಲಿದ್ದ ಇವರು ನಾಲ್ವರು ಕುಡಿದ ನಶೆಯಲ್ಲಿಕ್ಯಾತೆ ತೆಗೆದಿದ್ದರು. ಅಲ್ಲದೆ ಚಾಲಕನ ಬಟ್ಟೆ ಹರಿದು ಹಾಕಿ ಹಲ್ಲೆ ನಡೆಸಿದ್ದರು.

ತುಮಕೂರಿನ ಖಾಸಗಿ ಆಸ್ಪತ್ರೆಯಿಂದ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಗೆ ಖಾಸಗಿ ಆಂಬುಲೆನ್ಸ್ ಬರುತ್ತಿತ್ತು. ಐದು ತಿಂಗಳ ಮಗುವಿನ ತುರ್ತು ಚಿಕಿತ್ಸೆಗಾಗಿ, ಆಕ್ಸಿಜನ್ ಹಾಕಿಸಿ ಕರೆ ತರಲಾಗುತ್ತಿತ್ತು. ಚೇಸ್ ಮಾಡಿಕೊಂಡು ಬಂದು ಟೋಲ್ ಬಳಿ ಆಂಬುಲೆನ್ಸ್ ‌ನಿಂತಾಗ ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ನಡೆಸಿದ್ದರು.

ಮಗುವಿನ ಕಂಡಿಷನ್ ಕ್ರಿಟಿಕಲ್ ಇದೆ. ಬಿಟ್ಟುಬಿಡಿ ಎಂದು ಮಗುವಿನ ಪೋಷಕರು ಕೈಮುಗಿದರೂ ಪುಂಡಾಟ ಮುಂದುವರಿಸಿದ್ದರು. ಸ್ಥಳದಲ್ಲಿದ್ದ ಪೊಲೀಸರು ಗಲಾಟೆ ತಡೆದು ಆಂಬುಲೆನ್ಸ್ ಅನ್ನು ಆಸ್ಪತ್ರೆಗೆ ಕಳುಹಿಸಿದ್ದರು.

ಹೆಚ್ಚಿನ ಸುದ್ದಿ