ನವದೆಹಲಿ : ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಪಾಕ್ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಮೂವರು ಮಹಿಳೆಯರು ಮತ್ತು ಐವರು ಮಕ್ಕಳು ಸೇರಿದಂತೆ ಒಟ್ಟು 16 ಅಮಾಯಕರು ಬಲಿಯಾಗಿದ್ದಾರೆ ಎಂದು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಪಾಕಿಸ್ತಾನ ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ, ಬಾರಾಮುಲ್ಲಾ, ಉರಿ, ಪೂಂಚ್, ಮೆಂಧರ್ ಮತ್ತು ರಾಜೌರಿ ವಲಯಗಳಲ್ಲಿ ನಿಯಂತ್ರಣ ರೇಖೆಯುದ್ದಕ್ಕೂ ಅಪ್ರಚೋದಿತ ಗುಂಡಿನ ದಾಳಿಯ ತೀವ್ರತೆ ಹೆಚ್ಚಿಸಿದೆ.
ಪಾಕ್ನ ಡ್ರೋನ್ ಮತ್ತು ಕ್ಷಿಪಣಿ ದಾಳಿಯನ್ನು ವಿಫಲಗೊಳಿಸಲಾಗಿದೆ. ಪಾಕ್ ಪ್ರಚೋದನೆಗೆ ಭಾರತ ತಕ್ಕ ಉತ್ತರ ನೀಡಬೇಕಾಯಿತು. ಪಾಕ್ ಸೇನೆ ಗೌರದಿಂದ ವರ್ತಿಸಿದರೆ ಉದ್ವಿಗ್ನತೆ ಕಡಿಮೆಯಾಗಿಸಲು ಭಾರತೀಯ ಸಶಸ್ತ್ರ ಪಡೆಗಳು ತಮ್ಮ ಬದ್ಧತೆ ತೋರಲಿದೆ ಎಂದು ವಾರ್ನಿಂಗ್ ನೀಡಿದರು.
ಕರ್ನಲ್ ಸೋಫಿಯಾ ಖುರೇಷಿ ಅವರು ಮಾತನಾಡಿ, ಇಂದು ಬೆಳಿಗ್ಗೆ ಭಾರತೀಯ ಸಶಸ್ತ್ರ ಪಡೆಗಳು ಪಾಕಿಸ್ತಾನದ ಹಲವು ಸ್ಥಳಗಳಲ್ಲಿ ವಾಯು ರಕ್ಷಣಾ ರಾಡಾರ್ಗಳು ವ್ಯವಸ್ಥೆಗಳನ್ನ ಗುರಿಯಾಗಿಸಿ ಧ್ವಂಸಗೊಳಿಸಿವೆ. ಲಾಹೋರ್ನಲ್ಲಿರುವ ವಾಯು ರಕ್ಷಣಾ ವ್ಯವಸ್ಥೆಯನ್ನು ತಟಸ್ಥಗೊಳಿಸಲಾಗಿದೆ ಎಂದರು.