Wednesday, May 14, 2025
Homeಟಾಪ್ ನ್ಯೂಸ್OPERATION SINDOOR: ಸತ್ತ ಉಗ್ರರಿಗೂ ಸರ್ಕಾರಿ ಗೌರವ.. ಇದು ಸ್ವಾಮಿ ಪಾಕಿಸ್ತಾನ! - ಭಾರತ ಕಟು...

OPERATION SINDOOR: ಸತ್ತ ಉಗ್ರರಿಗೂ ಸರ್ಕಾರಿ ಗೌರವ.. ಇದು ಸ್ವಾಮಿ ಪಾಕಿಸ್ತಾನ! – ಭಾರತ ಕಟು ಟೀಕೆ

ನವದೆಹಲಿ: ಪಹಲ್ಗಾಮ್‌ ದಾಳಿಗೆ ಪ್ರತೀಕಾರವಾಗಿ ಭಾರತವು ಪಾಕಿಸ್ತಾನದಲ್ಲಿ ಉಗ್ರರ ಅಡಗುತಾಣಗಳನ್ನು ಧ್ವಂಸಗೊಳಿಸಿದೆ. ಅಚ್ಚರಿಯ ವಿಷಯವೆಂದರೆ ಭಾರತದ ಏರ್‌ಸ್ಟ್ರೈಕ್‌ನಲ್ಲಿ ಮೃತಪಟ್ಟ ಉಗ್ರರಿಗೆ ಸಕಲ ಸರ್ಕಾರಿ ಗೌರವಗೊಳೊಂದಿಗೆ ಅಂತ್ಯಕ್ರಿಯೆ ನೆರವೇರಸಲಾಗಿತ್ತು.

ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿಯವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ, ಭಯೋತ್ಪಾದಕರಿಗೆ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆಯನ್ನು ನೀಡಿರುವುದನ್ನು ಟೀಕಿಸಿದರು. ಪಾಕಿಸ್ತಾನ ಸೇನೆಯು ಭಯೋತ್ಪಾದಕರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿತು. ಭಯೋತ್ಪಾದಕರಿಗೆ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆಗಳನ್ನು ನೀಡುವುದು, ಬಹುಶಃ ಪಾಕಿಸ್ತಾನದಲ್ಲಿ ಒಂದು ಪದ್ಧತಿಯಾಗಿರಬಹುದು ಎಂದು ಹೇಳಿದರು.

ಪಾಕಿಸ್ತಾನದಲ್ಲಿ ಭಯೋತ್ಪಾದಕರಿಗೆ ಗೌರವಗಳನ್ನು ನೀಡಲಾಗುತ್ತಿದೆ. ಪಾಕಿಸ್ತಾನದ ಅಧಿಕಾರಿಗಳು ಭಯೋತ್ಪಾದಕರನ್ನು ಗೌರವಿಸುತ್ತಿದ್ದಾರೆ. ಜಾಗತಿಕ ಭಯೋತ್ಪಾದನೆಯ ಮೂಲ ಪಾಕಿಸ್ತಾನದಲ್ಲಿದೆ ಎಂಬುದು ಜಗಜ್ಜಾಹೀರಾಗಿದೆ. ಪ್ರಪಂಚದಾದ್ಯಂತದ ಭಯೋತ್ಪಾದಕ ದಾಳಿಗಳಿಗೆ ಪಾಕಿಸ್ತಾನ ಖಂಡಿತವಾಗಿಯೂ ದೂಷಿಸಲ್ಪಟ್ಟಿದೆ. ಒಸಾಮಾ ಬಿನ್ ಲಾಡೆನ್ ಎಲ್ಲಿ ಪತ್ತೆಯಾಗಿದ್ದಾನೆಂದು ಹೇಳಬೇಕಾಗಿಲ್ಲ. ಪಾಕಿಸ್ತಾನವು ಗಡಿಯಾಚೆಗಿನ ಭಯೋತ್ಪಾದನೆಯನ್ನು ಉತ್ತೇಜಿಸುತ್ತದೆ ಎಂದು ಎಲ್ಲರಿಗೂ ತಿಳಿದಿದೆ ಎಂದರು.

ಆಪರೇಷನ್ ಸಿಂಧೂರ್ ಅಡಿಯಲ್ಲಿ ಭಾರತ ನಡೆಸಿದ ದಾಳಿಯಲ್ಲಿ ಯಾವುದೇ ಪಾಕಿಸ್ತಾನಿ ನಾಗರಿಕರಿಗೆ ಹಾನಿಯಾಗಿಲ್ಲ ಎಂದು ಇದೇ ವೇಳೆ ಮಿಶ್ರಿ ಗುರುವಾರ ಪುನರುಚ್ಚರಿಸಿದ್ದಾರೆ.

ಹೆಚ್ಚಿನ ಸುದ್ದಿ

error: Content is protected !!