ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಮತ್ತು ಗ್ಯಾಂಗ್ ಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ಉದ್ಯಮಿ , ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆ ಪ್ರಕರಣದಲ್ಲಿ ಈಗ ರೇಣುಕಸ್ವಾಮಿ ಹತ್ಯೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡರನ್ನು ವಿಚಾರಣೆಗೊಳಪಡಿಸಲು ಪೊಲೀಸರು ಮುಂದಾಗಿದ್ದಾರೆ.
ಪವಿತ್ರಾ ಗೌಡ ಅವರ ಬಹುಕೋಟಿ ಮೌಲ್ಯದ ಮನೆ ಖರೀದಿಗೆ ಸೌಂದರ್ಯ ಜಗದೀಶ್ ಸಾಕ್ಷಿಯಾಗಿದ್ದರು. ಜೊತೆಗೆ ಸೌಂದರ್ಯ ಜಗದೀಶ್ ಅವರ ಖಾತೆಯಿಂದ ಪವಿತ್ರಾ ಗೌಡ ಖಾತೆಗೆ 2 ಕೋಟಿ ರೂ. ಹಣ ವರ್ಗಾವಣೆಯಾಗಿರುವುದು ಪತ್ತೆಯಾಗಿದೆ. ಈ ಹಣದ ಮೂಲ ಕೆದಕಲು ಪೊಲೀಸರು ಮುಂದಾಗಿದ್ದಾರೆ. ಬಹುಶಃ ಮನೆ ಖರೀದಿಗೆ ಸೌಂದರ್ಯ ಜಗದೀಶ್ ಅವರೇ ಹಣ ನೀಡಿರಬಹುದು ಎಂಬ ಅನುಮಾನವೂ ಸಹ ವ್ಯಕ್ತವಾಗಿದೆ.
ಸೌಂದರ್ಯ ಜಗದೀಶ್ ಅವರೊಂದಿಗೆ ಇದ್ದ ವ್ಯವಹಾರಗಳ ಬಗ್ಗೆ ವಿಚಾರಣೆ ನಡೆಸಲು ಈಗ ಪೊಲೀಸರು ಮುಂದಾಗಿದ್ದಾರೆ.