Sunday, July 7, 2024
Homeಟಾಪ್ ನ್ಯೂಸ್PAWAN KALYAN : ಆಂಧ್ರದಲ್ಲಿ ಆರ್ಥಿಕ ಸಂಕಷ್ಟ - ವೇತನ ತಿರಸ್ಕರಿಸಿದ ಪವನ್ ಕಲ್ಯಾಣ್!

PAWAN KALYAN : ಆಂಧ್ರದಲ್ಲಿ ಆರ್ಥಿಕ ಸಂಕಷ್ಟ – ವೇತನ ತಿರಸ್ಕರಿಸಿದ ಪವನ್ ಕಲ್ಯಾಣ್!

ಆಂಧ್ರಪ್ರದೇಶ ಸರ್ಕಾರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಹಾಗೂ ನಟ ಪವನ್ ಕಲ್ಯಾಣ್ ತಮ್ಮ ವೇತನ ಪಡೆಯಲು ನಿರಾಕರಿಸಿದ್ದಾರೆ.

ಕಾಕಿನಾಡ ಜಿಲ್ಲೆಯ ಗೋಲಾಪೊರ್ಲು ಗ್ರಾಮಕ್ಕೆ ಸೋಮವಾರ ಭೇಟಿ ನೀಡಿದ್ದ ಪವನ್ ಕಲ್ಯಾಣ್, ಎನ್ ಟಿಆರ್ ಭರೋಸಾ ಪಿಂಚಣಿ ಪತ್ರಗಳನ್ನು ವಿತರಿಸಿದರು. ಈ ವೇಳೆ ಮಾತನಾಡಿದ ಅವರು, ಸರ್ಕಾರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವುದರಿಂದ ವೇತನ ಪಡೆಯುವುದಿಲ್ಲ ಎಂದರು.

ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅನಗತ್ಯವಾಗಿ ಅರಮನೆ ಕಟ್ಟಿಸಿಕೊಂಡು ರಾಜ್ಯವನ್ನು ಸಂಕಷ್ಟಕ್ಕೆ ದೂಡಿದ್ದಾರೆ. ಇಲಾಖೆಗಳಲ್ಲಿ ಹಣದ ಕೊರತೆ ಇದ್ದರೂ ಬಂಗಲೆ ಕಟ್ಟಿಸಿಕೊಂಡಿದ್ದಾರೆ ಎಂದು ಅವರು ಆರೋಪಿಸಿದರು.

ಇದೇ ವೇಳೆ ಜನರಿಗೆ ಕುಡಿಯುವ ನೀರು ಸಮರ್ಪಕವಾಗಿ ತಲುಪಿಸುವುದೇ ನಮ್ಮ ಮೊದಲ ಆದ್ಯತೆ ಎಂದು ಪವನ್ ಕಲ್ಯಾಣ್ ಹೇಳಿದರು.

ಹೆಚ್ಚಿನ ಸುದ್ದಿ