Sunday, July 7, 2024
Homeಟಾಪ್ ನ್ಯೂಸ್UTTAR PRADESH: ನೀರಿನ ಟ್ಯಾಂಕ್‌ ಕುಸಿದು ಭಾರೀ ದುರಂತ : ಇಬ್ಬರ ದುರ್ಮರಣ

UTTAR PRADESH: ನೀರಿನ ಟ್ಯಾಂಕ್‌ ಕುಸಿದು ಭಾರೀ ದುರಂತ : ಇಬ್ಬರ ದುರ್ಮರಣ

ಉತ್ತರ ಪ್ರದೇಶ: ವಸತಿ ಕಾಲೋನಿಯಲ್ಲಿದ್ದ ನೀರಿನ ಟ್ಯಾಂಕ್ ಕುಸಿದು ಇಬ್ಬರು ಸಾವನ್ನಪ್ಪಿದ್ದು, 13 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಮಥುರಾದಲ್ಲಿ ನಡೆದಿದೆ.

ಆವಾಸ್ ವಿಕಾಸ್ ಪರಿಷತ್ ಅಭಿವೃದ್ಧಿಪಡಿಸಿದ ಕೃಷ್ಣ ವಿಹಾರ್ ಕಾಲೋನಿಯಲ್ಲಿ ಭಾನುವಾರ (ಜೂನ್ 30) ಸಂಜೆ 6 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

ಪೊಲೀಸ್ ಸಿಬ್ಬಂದಿ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ಅಗ್ನಿಶಾಮಕ ದಳ, ಮುನ್ಸಿಪಲ್ ಕಾರ್ಪೊರೇಷನ್ ಮತ್ತು ಆರೋಗ್ಯ ಇಲಾಖೆಯ ತಂಡಗಳು ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಯೋಗೇಂದ್ರ ಪಾಂಡೆ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ ಎಂದು ಖಚಿತಪಡಿಸಿದ್ದಾರೆ.

ನೀರಿನ ಟ್ಯಾಂಕ್ ಸುತ್ತಲೂ ಇರುವ ಮನೆಗಳಿಗೂ ಹಾನಿಯುಂಟಾಗಿದ್ದು ಹಲವು ಮನೆಗಳು ಕುಸಿಯುವ ಭೀತಿಯಲ್ಲಿದೆ.

ಘಟನೆಯ ಕುರಿತು ಮಾಹಿತಿ ಪಡೆದಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ನೀರಿನ ಟ್ಯಾಂಕ್‌ ಕಟ್ಟಿಸಿದ ಕಾಂಟ್ರಾಕ್ಟರ್‌ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಸೂಚಿಸಿದ್ದಾರೆ

ಹೆಚ್ಚಿನ ಸುದ್ದಿ