ನವದೆಹಲಿ : ಜೋಶಿ 10 ವರ್ಷ ಅವಧಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳೇ ಅವರಿಗೆ ಶ್ರೀರಕ್ಷೆ. ಅವರ ಅಭಿವೃದ್ಧಿಯ ಕಾರ್ಯವನ್ನು ನಾನು ದೆಹಲಿಯಲ್ಲಿದ್ದುಕೊಂಡೇ ನೋಡಿದ್ದೇನೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ಪ್ರಧಾನಿ ಮೋದಿ ಪತ್ರ ಬರೆದಿದ್ದಾರೆ.
ಸಚಿವ ಪ್ರಹ್ಲಾದ್ ಜೋಶಿ ಅವರು ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳು ಶ್ಲಾಘನೀಯ. ಕ್ಷೇತ್ರಕ್ಕಾಗಿ ಹಗಲು ರಾತ್ರಿ ಎನ್ನದೆ ದುಡಿಯುತ್ತಿದ್ದೀರಿ. ಪ್ರತಿ ಮನೆಯ ಜನರ ಪ್ರೀತಿಗೆ ಪಾತ್ರರಾಗಿದ್ದೀರಿ ಎಂದಿದ್ದಾರೆ.
ಕ್ಷೇತ್ರದಲ್ಲಿ ನಿಮ್ಮ ಪರಿಶ್ರಮದಿಂದ ಹೊಸ ದಾಖಲೆ ಸೃಷ್ಠಿಯಾಗುತ್ತದೆ ಎಂಬ ವಿಶ್ವಾಸ ನನಗಿದೆ. ಇದರಿಂದ ಅಲ್ಲಿನ ಜನ ನಿಮ್ಮಲ್ಲಿ ನನ್ನನ್ನು ಕಾಣುತ್ತಿದ್ದಾರೆ. ನಿಜವಾಗಿ ಹೇಳಬೇಕಾದರೆ ಮತದಾರನ ದೃಷ್ಟಿಯಲ್ಲಿ ನೀವೊಬ್ಬ ಮೋದಿಯಾಗಿದ್ದೀರಿ ಎಂದು ಬರೆದಿದ್ದಾರೆ.
10 ವರ್ಷ ಅವಧಿಯಲ್ಲಿ ಏನೆಲ್ಲಾ ಕೆಲಸ ಮಾಡಿದ್ದಾರೆಂದು ನನಗಿಂತ ಚೆನ್ನಾಗಿ ಕ್ಷೇತ್ರದ ಜನರಿಗೆ ಗೊತ್ತು ಅದೇ ಅವರನ್ನು ಗೆಲ್ಲಿಸುತ್ತದೆ ಎಂದು ಪ್ರಹ್ಲಾದ್ ಜೋಶಿಗೆ ಪತ್ರ ಬರೆದು ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.