Monday, January 19, 2026
Homeರಾಜ್ಯಕೇಂದ್ರ ಕಾರಾಗೃಹದ ಮೇಲೆ ದಾಳಿ - ಹಣ, ಗಾಂಜಾ ಪತ್ತೆ

ಕೇಂದ್ರ ಕಾರಾಗೃಹದ ಮೇಲೆ ದಾಳಿ – ಹಣ, ಗಾಂಜಾ ಪತ್ತೆ

ಮೈಸೂರು : ಮೈಸೂರು ಕೇಂದ್ರ ಕಾರಾಗೃಹದ ಮೇಲೆ ಸೋಮವಾರ ನಗರ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಜೈಲು ಆವರಣದಲ್ಲಿ ಹಣ ಮತ್ತು ಗಾಂಜಾ ಪತ್ತೆಯಾಗಿದೆ.
ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಆದೇಶದನ್ವಯ, ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಮುತ್ತುರಾಜ್ ಮತ್ತು ಅಪರಾಧ – ಸಂಚಾರ ವಿಭಾಗದ ಡಿಸಿಪಿ ಎಸ್. ಜಾಹ್ನವಿ ನೇತೃತ್ವದ ತಂಡ ಕಾರಾಗೃಹದ ಮೇಲೆ ಧಿಡೀರ್ ದಾಳಿ ನಡೆಸಿದ್ದರು. ಪೊಲೀಸ್ ಶ್ವಾನದಳವನ್ನೂ ಈ ವೇಳೆ ಕರೆದೊಯ್ಯಲಾಗಿತ್ತು. ಜೈಲು ಆವರಣದಲ್ಲಿ ಅಕ್ರಮ ವಸ್ತುಗಳು ಪತ್ತೆಯಾಗಿರುವ ಬಗ್ಗೆ ಮಂಡಿ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಹೆಚ್ಚಿನ ಸುದ್ದಿ

Change Language »
While viewing the website, tap in the menu bar. Scroll down the list of options, then tap Add to Home Screen.
Use Safari for a better experience.
error: Content is protected !!