Thursday, July 10, 2025
Homeರಾಜ್ಯಕೇಂದ್ರ ಕಾರಾಗೃಹದ ಮೇಲೆ ದಾಳಿ - ಹಣ, ಗಾಂಜಾ ಪತ್ತೆ

ಕೇಂದ್ರ ಕಾರಾಗೃಹದ ಮೇಲೆ ದಾಳಿ – ಹಣ, ಗಾಂಜಾ ಪತ್ತೆ

ಮೈಸೂರು : ಮೈಸೂರು ಕೇಂದ್ರ ಕಾರಾಗೃಹದ ಮೇಲೆ ಸೋಮವಾರ ನಗರ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಜೈಲು ಆವರಣದಲ್ಲಿ ಹಣ ಮತ್ತು ಗಾಂಜಾ ಪತ್ತೆಯಾಗಿದೆ.
ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಆದೇಶದನ್ವಯ, ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಮುತ್ತುರಾಜ್ ಮತ್ತು ಅಪರಾಧ – ಸಂಚಾರ ವಿಭಾಗದ ಡಿಸಿಪಿ ಎಸ್. ಜಾಹ್ನವಿ ನೇತೃತ್ವದ ತಂಡ ಕಾರಾಗೃಹದ ಮೇಲೆ ಧಿಡೀರ್ ದಾಳಿ ನಡೆಸಿದ್ದರು. ಪೊಲೀಸ್ ಶ್ವಾನದಳವನ್ನೂ ಈ ವೇಳೆ ಕರೆದೊಯ್ಯಲಾಗಿತ್ತು. ಜೈಲು ಆವರಣದಲ್ಲಿ ಅಕ್ರಮ ವಸ್ತುಗಳು ಪತ್ತೆಯಾಗಿರುವ ಬಗ್ಗೆ ಮಂಡಿ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಹೆಚ್ಚಿನ ಸುದ್ದಿ

While viewing the website, tap in the menu bar. Scroll down the list of options, then tap Add to Home Screen.
Use Safari for a better experience.
error: Content is protected !!